<p><strong>ಹುಬ್ಬಳ್ಳಿ</strong>: ‘ಕೈಗಾರಿಕೆಗಳ ಅಭಿವೃದ್ಧಿಗಾಗಿ ಪ್ರತಿ ಜಿಲ್ಲೆಯಲ್ಲಿ ಸುಮಾರು ಒಂದು ಸಾವಿರ ಎಕರೆಯ ಕೈಗಾರಿಕಾ ಭೂ ಬ್ಯಾಂಕ್ ಸ್ಥಾಪಿಸುವ ಉದ್ದೇಶವಿದೆ’ ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.</p>.<p>ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಬುಧವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ‘ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉದ್ಯಮ ಸ್ಥಾಪನೆಯಾಗಿ, ಶೇ 25ರಷ್ಟು ರಿಯಾಯಿತಿಯಲ್ಲಿ ಎರಡು ಎಕರೆ ಭೂಮಿ ನೀಡಲಾಗುವುದು’ ಎಂದರು.</p>.<p>‘ರಿಯಾಯಿತಿಯಲ್ಲಿ ಪಡೆದ ಭೂಮಿಯನ್ನು ಅವರು 10 ವರ್ಷಗಳವರೆಗೆ ಮಾರಾಟ ಮಾಡುವಂತಿಲ್ಲ. ಬಳಿಕ ಮಾರಾಟ ಮಾಡಬೇಕಾದರೆ, ಅದೇ ಸಮುದಾಯದವರಿಗೆ ಉದ್ಯಮ ಸ್ಥಾಪನೆ ಉದ್ದೇಶಕ್ಕಾಗಿಯೇ ಮಾರಾಟ ಮಾಡಬೇಕಾಗುತ್ತದೆ’ ಎಂದು ತಿಳಿಸಿದರು.</p>.<p>‘ನವೋದ್ಯಮಿಗಳಿಗೂ ಉದ್ಯಮ ಸ್ಥಾಪನೆಗೆ ಎರಡು ಎಕರೆ ಭೂಮಿಯನ್ನು ಶೇ 25 ರಿಯಾಯಿತಿಯೊಂದಿಗೆ ನೀಡಲಾಗುವುದು. ಶೇ 25ರಷ್ಟು ಮೊತ್ತವನ್ನು ಎಂಟು ಕಂತುಗಳಲ್ಲಿ ಪಾವತಿಸುವ ಅನುಕೂಲ ಕಲ್ಪಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p class="Subhead"><strong>ಮನವಿ:</strong>ಹುಬ್ಬಳ್ಳಿ-ಧಾರವಾಡ ವಿವಿಧೊದ್ದೇಶ ವಸ್ತು ಪ್ರದರ್ಶನ ಕೇಂದ್ರದ ಕಾಮಗಾರಿಗೆ ಹೆಚ್ಚಿನ ಅನುದಾನ ಬಿಡುಗಡೆ, ನವೆಂಬರ್ನಲ್ಲಿ ಆಯೋಜನೆಗೊಳ್ಳಲಿರುವ 2022–23 ಸಾಲಿನ ಇನ್ಕಾಮೆಕ್ಸ್ ಕೈಗಾರಿಕಾ ವಸ್ತು ಪ್ರದರ್ಶನದ ಮೇಳಕ್ಕೆ ₹5 ಕೋಟಿ ಅನುದಾನ, ಉತ್ತರ ಕರ್ನಾಟಕದಲ್ಲಿ ಉದ್ಯಮಗಳ ಸ್ಥಾಪನೆಗೆ ಕ್ರಮ ಹಾಗೂ ಕೇಂದ್ರ ಪ್ಲಾಸ್ಟಿಕ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಸ್ಥಾಪನೆಗೆ ಭೂಮಿ ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.</p>.<p>ಸಂಸ್ಥೆಯ ಅಧ್ಯಕ್ಷ ವಿನಯ ಜವಳಿ, ಉಪಾಧ್ಯಕ್ಷರಾದ ಎಸ್.ಪಿ. ಸಂಶಿಮಠ, ಸಂದೀಪ ಬಿಡಸಾರಿಯಾ, ಬಿ.ಎಸ್. ಸತೀಶ, ಗೌರವ ಕಾರ್ಯದರ್ಶಿಗಳಾದ ಪ್ರವೀಣ ಅಗಡಿ, ಶಂಕರ ಕೋಳಿವಾಡ, ಮಾಜಿ ಅಧ್ಯಕ್ಷರಾದ ರಮೇಶ ಪಾಟೀಲ ಹಾಗೂ ಇತರ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಕೈಗಾರಿಕೆಗಳ ಅಭಿವೃದ್ಧಿಗಾಗಿ ಪ್ರತಿ ಜಿಲ್ಲೆಯಲ್ಲಿ ಸುಮಾರು ಒಂದು ಸಾವಿರ ಎಕರೆಯ ಕೈಗಾರಿಕಾ ಭೂ ಬ್ಯಾಂಕ್ ಸ್ಥಾಪಿಸುವ ಉದ್ದೇಶವಿದೆ’ ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.</p>.<p>ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಬುಧವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ‘ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉದ್ಯಮ ಸ್ಥಾಪನೆಯಾಗಿ, ಶೇ 25ರಷ್ಟು ರಿಯಾಯಿತಿಯಲ್ಲಿ ಎರಡು ಎಕರೆ ಭೂಮಿ ನೀಡಲಾಗುವುದು’ ಎಂದರು.</p>.<p>‘ರಿಯಾಯಿತಿಯಲ್ಲಿ ಪಡೆದ ಭೂಮಿಯನ್ನು ಅವರು 10 ವರ್ಷಗಳವರೆಗೆ ಮಾರಾಟ ಮಾಡುವಂತಿಲ್ಲ. ಬಳಿಕ ಮಾರಾಟ ಮಾಡಬೇಕಾದರೆ, ಅದೇ ಸಮುದಾಯದವರಿಗೆ ಉದ್ಯಮ ಸ್ಥಾಪನೆ ಉದ್ದೇಶಕ್ಕಾಗಿಯೇ ಮಾರಾಟ ಮಾಡಬೇಕಾಗುತ್ತದೆ’ ಎಂದು ತಿಳಿಸಿದರು.</p>.<p>‘ನವೋದ್ಯಮಿಗಳಿಗೂ ಉದ್ಯಮ ಸ್ಥಾಪನೆಗೆ ಎರಡು ಎಕರೆ ಭೂಮಿಯನ್ನು ಶೇ 25 ರಿಯಾಯಿತಿಯೊಂದಿಗೆ ನೀಡಲಾಗುವುದು. ಶೇ 25ರಷ್ಟು ಮೊತ್ತವನ್ನು ಎಂಟು ಕಂತುಗಳಲ್ಲಿ ಪಾವತಿಸುವ ಅನುಕೂಲ ಕಲ್ಪಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p class="Subhead"><strong>ಮನವಿ:</strong>ಹುಬ್ಬಳ್ಳಿ-ಧಾರವಾಡ ವಿವಿಧೊದ್ದೇಶ ವಸ್ತು ಪ್ರದರ್ಶನ ಕೇಂದ್ರದ ಕಾಮಗಾರಿಗೆ ಹೆಚ್ಚಿನ ಅನುದಾನ ಬಿಡುಗಡೆ, ನವೆಂಬರ್ನಲ್ಲಿ ಆಯೋಜನೆಗೊಳ್ಳಲಿರುವ 2022–23 ಸಾಲಿನ ಇನ್ಕಾಮೆಕ್ಸ್ ಕೈಗಾರಿಕಾ ವಸ್ತು ಪ್ರದರ್ಶನದ ಮೇಳಕ್ಕೆ ₹5 ಕೋಟಿ ಅನುದಾನ, ಉತ್ತರ ಕರ್ನಾಟಕದಲ್ಲಿ ಉದ್ಯಮಗಳ ಸ್ಥಾಪನೆಗೆ ಕ್ರಮ ಹಾಗೂ ಕೇಂದ್ರ ಪ್ಲಾಸ್ಟಿಕ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಸ್ಥಾಪನೆಗೆ ಭೂಮಿ ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.</p>.<p>ಸಂಸ್ಥೆಯ ಅಧ್ಯಕ್ಷ ವಿನಯ ಜವಳಿ, ಉಪಾಧ್ಯಕ್ಷರಾದ ಎಸ್.ಪಿ. ಸಂಶಿಮಠ, ಸಂದೀಪ ಬಿಡಸಾರಿಯಾ, ಬಿ.ಎಸ್. ಸತೀಶ, ಗೌರವ ಕಾರ್ಯದರ್ಶಿಗಳಾದ ಪ್ರವೀಣ ಅಗಡಿ, ಶಂಕರ ಕೋಳಿವಾಡ, ಮಾಜಿ ಅಧ್ಯಕ್ಷರಾದ ರಮೇಶ ಪಾಟೀಲ ಹಾಗೂ ಇತರ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>