<p><strong>ಹುಬ್ಬಳ್ಳಿ:</strong> ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 43ರಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಅವರು ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.</p>.<p>ರಾಜೇಂದ್ರ ಪ್ರಸಾದ ಕಾಲೊನಿಯಲ್ಲಿ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡ ನಿರ್ಮಾಣ, ವಿನಯ ಕಾಲೊನಿಯಲ್ಲಿ ಸನ್ ಸಿಟಿ ಹೆರಿಟೇಜ್ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.</p>.<p>ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ‘ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು ಎಂಬುದು ಜನರ ಬಹು ವರ್ಷಗಳ ಬೇಡಿಕೆಯಾಗಿತ್ತು. ಈಗ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಭಾಗದ ಜನರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲಾಗುವುದು’ ಎಂದರು.</p>.<p>‘ಅಭಿವೃದ್ದಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಅನುದಾನ ಸಿಗುತ್ತಿಲ್ಲ. ಆದರೂ, ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ಅನುದಾನ ತರಲಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದ್ದು, ಜನರ ಸಹಕಾರವೂ ಅಗತ್ಯ’ ಎಂದು ಹೇಳಿದರು.</p>.<p>ಮಹಾನಗರ ಪಾಲಿಕೆ ಸದಸ್ಯ ಬೀರಪ್ಪ ಖಂಡೇಕರ ಮಾತನಾಡಿದರು. ಈ ವೇಳೆ ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ರಾಜು ಕಾಳೆ, ಗಿರೀಶ ಗುಮಾಸ್ತೆ, ಕೃಷ್ಣ ಕುಲಕರ್ಣಿ, ಅಶೋಕ ವಾಲ್ಮೀಕಿ, ಪ್ರವೀಣ ಪವಾರ, ರಾಮನಗೌಡ ಶೆಟ್ಟನಗೌಡರ್, ರಘು ಹಬೀಬ, ಆನಂದ ಕಾಳೆ, ವೆಂಕಟೇಶ ಹಬೀಬ, ಶ್ರೀನಿವಾಸ ನಿಟ್ಟೂರು, ವೆಂಕಟೇಶ ದಿವಾನಗಿ, ದೀರೇಂದ್ರ ಬಾಗಲಕೋಟೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 43ರಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಅವರು ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.</p>.<p>ರಾಜೇಂದ್ರ ಪ್ರಸಾದ ಕಾಲೊನಿಯಲ್ಲಿ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡ ನಿರ್ಮಾಣ, ವಿನಯ ಕಾಲೊನಿಯಲ್ಲಿ ಸನ್ ಸಿಟಿ ಹೆರಿಟೇಜ್ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.</p>.<p>ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ‘ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು ಎಂಬುದು ಜನರ ಬಹು ವರ್ಷಗಳ ಬೇಡಿಕೆಯಾಗಿತ್ತು. ಈಗ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಭಾಗದ ಜನರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲಾಗುವುದು’ ಎಂದರು.</p>.<p>‘ಅಭಿವೃದ್ದಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಅನುದಾನ ಸಿಗುತ್ತಿಲ್ಲ. ಆದರೂ, ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ಅನುದಾನ ತರಲಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದ್ದು, ಜನರ ಸಹಕಾರವೂ ಅಗತ್ಯ’ ಎಂದು ಹೇಳಿದರು.</p>.<p>ಮಹಾನಗರ ಪಾಲಿಕೆ ಸದಸ್ಯ ಬೀರಪ್ಪ ಖಂಡೇಕರ ಮಾತನಾಡಿದರು. ಈ ವೇಳೆ ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ರಾಜು ಕಾಳೆ, ಗಿರೀಶ ಗುಮಾಸ್ತೆ, ಕೃಷ್ಣ ಕುಲಕರ್ಣಿ, ಅಶೋಕ ವಾಲ್ಮೀಕಿ, ಪ್ರವೀಣ ಪವಾರ, ರಾಮನಗೌಡ ಶೆಟ್ಟನಗೌಡರ್, ರಘು ಹಬೀಬ, ಆನಂದ ಕಾಳೆ, ವೆಂಕಟೇಶ ಹಬೀಬ, ಶ್ರೀನಿವಾಸ ನಿಟ್ಟೂರು, ವೆಂಕಟೇಶ ದಿವಾನಗಿ, ದೀರೇಂದ್ರ ಬಾಗಲಕೋಟೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>