ಕೋವಿಡ್ನಿಂದ ಚೇತರಿಸಿಕೊಂಡ ಬಳಿಕ ಮೊದಲ ಸಲ ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ‘ಜನರ ಸಂಕಷ್ಟಕ್ಕೆ ಸ್ಪಂದಿಸಲು ರಾಜ್ಯ ಸರ್ಕಾರ ಮಹತ್ವದ ಕಾಯ್ದೆಗಳನ್ನು ಜಾರಿಗೆ ತರಲು ಪ್ರಯತ್ನಿಸಿದರೂ, ವಿಧಾನಪರಿಷತ್ನಲ್ಲಿ ಬಹುಮತ ಲಭಿಸದ ಕಾರಣ ಸಾಧ್ಯವಾಗಿಲ್ಲ. ಆದ್ದರಿಂದ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರದಲ್ಲಿನರೇಂದ್ರ ಮೋದಿ ಅವರಿಗೆ ಬಲ ತುಂಬಲು ಈ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ’ ಎಂದರು.