ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಧನಿಗೆ ಕಣ್ಣೀರ ವಿದಾಯ

ಅನಾರೋಗ್ಯದಿಂದ ನಿಧನ ಹೊಂದಿದ ಮಹದೇವಪ್ಪ ಮುತ್ತಗಿ
Last Updated 29 ಮೇ 2022, 19:35 IST
ಅಕ್ಷರ ಗಾತ್ರ

ಕಲಘಟಗಿ: ಅನಾರೋಗ್ಯದಿಂದ ನಿಧನ ಹೊಂದಿದ ತಾಲ್ಲೂಕಿನ ಬೇಗೂರ ಗ್ರಾಮದ ಯೋಧ ಮಹದೇವಪ್ಪ ಷಣ್ಮುಖಪ್ಪ ಮುತ್ತಗಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾನುವಾರ ನಡೆಯಿತು.

ಪಾರ್ಥಿವ ಶರೀರರವನ್ನು ಗ್ರಾಮಕ್ಕೆ ತರುತ್ತಿದ್ದಂತೆ ಪೂಜೆ ಸಲ್ಲಿಸಲಾಯಿತು. ಶಾಸಕ ಸಿ. ಎಂ ನಿಂಬಣ್ಣವರ, ಕೆಪಿಸಿಸಿ ಉಪಾಧ್ಯಕ್ಷ ಸಂತೋಷ್ ಲಾಡ್ ಹಾಗೂ ನೂರಾರು ಜನ ಯೋಧನ ಅಂತಿಮ ದರ್ಶನ ಪಡೆದರು.

ಜೈ ಹಿಂದ್‌, ಭಾರತ್‌ ಮಾತಾಕಿ ಜೈ ಘೋಷಣೆ ಮೊಳಗಿದವು. ನಂತರ ‌ಪ್ರಮುಖ ಬೀದಿಗಳಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಗ್ರಾಮದ ಜನರು ನಮಿಸಿ ಅಂತಿಮ ಗೌರವ ಸಲ್ಲಿಸಿದರು.

ಕುಟುಂಬದವರು ಸಂಪ್ರದಾಯದ ಪ್ರಕಾರ ಪೂಜೆ ಸಲ್ಲಿಸಿದರು. ಸೇನಾ ಕಮಾಂಡರ್‌ಗಳು ಕುಟುಂಬ
ದವರಿಗೆ ರಾಷ್ಟ್ರಧ್ವಜ ಹಸ್ತಾಂತರ ಮಾಡಿ ಯೋಧನಿಗೆ ಗೌರವ ಸಲ್ಲಿಸಿದರು. ಗ್ರಾಮವೇ ಶೋಕ
ಸಾಗರದಲ್ಲಿ ಮುಳುಗಿತ್ತು, ಕುಟುಂಬ
ದವರ ಆಕ್ರಂದನ ಮುಗಿಲು ಮುಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT