<p><strong>ಹುಬ್ಬಳ್ಳಿ</strong>: ‘ಬಂಜಾರ ಸಮಾಜದವರ ಮೂಲ, ಭಾಷೆಯ ಕುರಿತು ಸಂಶೋಧನೆ ನಡೆಯಬೇಕು. ಮೂಢನಂಬಿಕೆಯಿಂದ ಸಮಾಜದಲ್ಲಿ ಆಗುತ್ತಿರುವ ಅನೇಕ ತಪ್ಪುಗಳು ನಿವಾರಣೆ ಆಗಬೇಕು’ ಎಂದು ಸಾಹಿತಿ ಬಿ.ಟಿ.ಲಲಿತಾ ನಾಯಕ್ ತಿಳಿಸಿದರು.</p><p>ಇಲ್ಲಿ ಶನಿವಾರ ಬಂಜಾರ ಭವನದಲ್ಲಿ ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬಂಜಾರ ಸಮಾಜದವರು ಹೊಸ ಕಾಲಘಟಕ್ಕೆ ತಕ್ಕಂತೆ ಜೀವನಶೈಲಿ ರೂಢಿಸಿಕೊಳ್ಳಬೇಕು. ಸುಧಾರಣೆ ಕಂಡುಕೊಳ್ಳಲು ಸಾಹಿತ್ಯದ ಮೂಲಕ ಅವಲೋಕನ ಮಾಡಬೇಕು’ ಎಂದರು.</p><p>ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಮಾತನಾಡಿ, ‘ಹುಬ್ಬಳ್ಳಿಯಲ್ಲಿ ಪರಿಷತ್ತಿನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ನಿವೇಶನ ನೀಡಬೇಕು. ಬಂಜಾರರ ಬದುಕಿನ ಸುಧಾರಣೆಗೆ ಆದ್ಯತೆ ನೀಡಬೇಕು’ ಎಂದರು.</p><p>ಸಚಿವ ಸಂತೋಷ್ ಲಾಡ್ ಪರಿಷತ್ತಿನ ಲಾಂಛನ ಬಿಡುಗಡೆ ಮಾಡಿದರು. ಪರಿಷತ್ತಿನ ಅಧ್ಯಕ್ಷ ಶ್ರೀಕಾಂತ ಆರ್.ಜಾಧವ, ಗೌರವಾಧ್ಯಕ್ಷ ಪ್ರೊ.ಪಿ.ಕೆ.ಖಂಡೋಬಾ, ಕಾರ್ಯಾಧ್ಯಕ್ಷ ಎಲ್.ಮಧುನಾಯ್ಕ ಮಾತನಾಡಿದರು.</p><p>ವಿಧಾನಸಭಾ ಉಪಸಭಾಪತಿ ರುದ್ರಪ್ಪ ಲಮಾಣಿ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಕರ್ನಾಟಕ ತಾಂಡಾ ಅಭಿ ವೃದ್ಧಿ ನಿಗಮದ ಅಧ್ಯಕ್ಷ ಎನ್.ಜಯದೇವ ನಾಯ್ಕ್, ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಿ.ಬಿ.ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಬಂಜಾರ ಸಮಾಜದವರ ಮೂಲ, ಭಾಷೆಯ ಕುರಿತು ಸಂಶೋಧನೆ ನಡೆಯಬೇಕು. ಮೂಢನಂಬಿಕೆಯಿಂದ ಸಮಾಜದಲ್ಲಿ ಆಗುತ್ತಿರುವ ಅನೇಕ ತಪ್ಪುಗಳು ನಿವಾರಣೆ ಆಗಬೇಕು’ ಎಂದು ಸಾಹಿತಿ ಬಿ.ಟಿ.ಲಲಿತಾ ನಾಯಕ್ ತಿಳಿಸಿದರು.</p><p>ಇಲ್ಲಿ ಶನಿವಾರ ಬಂಜಾರ ಭವನದಲ್ಲಿ ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬಂಜಾರ ಸಮಾಜದವರು ಹೊಸ ಕಾಲಘಟಕ್ಕೆ ತಕ್ಕಂತೆ ಜೀವನಶೈಲಿ ರೂಢಿಸಿಕೊಳ್ಳಬೇಕು. ಸುಧಾರಣೆ ಕಂಡುಕೊಳ್ಳಲು ಸಾಹಿತ್ಯದ ಮೂಲಕ ಅವಲೋಕನ ಮಾಡಬೇಕು’ ಎಂದರು.</p><p>ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಮಾತನಾಡಿ, ‘ಹುಬ್ಬಳ್ಳಿಯಲ್ಲಿ ಪರಿಷತ್ತಿನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ನಿವೇಶನ ನೀಡಬೇಕು. ಬಂಜಾರರ ಬದುಕಿನ ಸುಧಾರಣೆಗೆ ಆದ್ಯತೆ ನೀಡಬೇಕು’ ಎಂದರು.</p><p>ಸಚಿವ ಸಂತೋಷ್ ಲಾಡ್ ಪರಿಷತ್ತಿನ ಲಾಂಛನ ಬಿಡುಗಡೆ ಮಾಡಿದರು. ಪರಿಷತ್ತಿನ ಅಧ್ಯಕ್ಷ ಶ್ರೀಕಾಂತ ಆರ್.ಜಾಧವ, ಗೌರವಾಧ್ಯಕ್ಷ ಪ್ರೊ.ಪಿ.ಕೆ.ಖಂಡೋಬಾ, ಕಾರ್ಯಾಧ್ಯಕ್ಷ ಎಲ್.ಮಧುನಾಯ್ಕ ಮಾತನಾಡಿದರು.</p><p>ವಿಧಾನಸಭಾ ಉಪಸಭಾಪತಿ ರುದ್ರಪ್ಪ ಲಮಾಣಿ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಕರ್ನಾಟಕ ತಾಂಡಾ ಅಭಿ ವೃದ್ಧಿ ನಿಗಮದ ಅಧ್ಯಕ್ಷ ಎನ್.ಜಯದೇವ ನಾಯ್ಕ್, ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಿ.ಬಿ.ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>