<p><strong>ಹುಬ್ಬಳ್ಳಿ: </strong>ರಾಷ್ಟ್ರೀಯ ಗ್ರಾಹಕರ ದಿನ ಅಂಗವಾಗಿ ಇಲ್ಲಿನ ಜೆಎಸ್ಎಸ್ ಸಕ್ರಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನ್ಯಾಯಾಧೀಶ ರವೀಂದ್ರ ಆರಿ, ಪ್ರತಿ ವ್ಯಕ್ತಿಗೂ ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಅವಶ್ಯಕ. ನಗರ, ಹಳ್ಳಿ ಹಾಗೂ ಸಮಾಜದ ಅಭಿವೃದ್ಧಿಗೆ ಜಾಗೃತ ಗ್ರಾಹಕನ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು.</p>.<p>ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಸಿ.ಆರ್. ಪಾಟೀಲ, ‘ಗ್ರಾಹಕರ ಹಿತರಕ್ಷಣೆಗಾಗಿಯೇ ಪ್ರತ್ಯೇಕ ಕಾನೂನು ಜಾರಿಗೆ ತರಲಾಗಿದೆ. ಅಮೆರಿಕದಲ್ಲಿ ಗ್ರಾಹಕ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಂತಹ ಕಾನೂನು ಭಾರತದಲ್ಲಿ ತರುವ ಅಗತ್ಯವಿದೆ’ ಎಂದರು.</p>.<p>ಪ್ರಾಚಾರ್ಯೆ ಡಾ. ರೂಪಾ ಇಂಗಳಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಶ್ರೀಶೈಲ ಮುಧೋಳ, ಪ್ರೊ. ಬಾಬೂಲಾಲ ದರಗದ, ಪ್ರೊ. ದೀಪಾ ಪಾಟೀಲ, ಸುರೇಶ ಲಿಂಬಿಕಾಯಿ, ಆರ್.ಎಸ್. ಅವಧಾನಿ, ಸತೀಶ ಸಿ.ವಿ., ಬಿ. ಭರತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ರಾಷ್ಟ್ರೀಯ ಗ್ರಾಹಕರ ದಿನ ಅಂಗವಾಗಿ ಇಲ್ಲಿನ ಜೆಎಸ್ಎಸ್ ಸಕ್ರಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನ್ಯಾಯಾಧೀಶ ರವೀಂದ್ರ ಆರಿ, ಪ್ರತಿ ವ್ಯಕ್ತಿಗೂ ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಅವಶ್ಯಕ. ನಗರ, ಹಳ್ಳಿ ಹಾಗೂ ಸಮಾಜದ ಅಭಿವೃದ್ಧಿಗೆ ಜಾಗೃತ ಗ್ರಾಹಕನ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು.</p>.<p>ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಸಿ.ಆರ್. ಪಾಟೀಲ, ‘ಗ್ರಾಹಕರ ಹಿತರಕ್ಷಣೆಗಾಗಿಯೇ ಪ್ರತ್ಯೇಕ ಕಾನೂನು ಜಾರಿಗೆ ತರಲಾಗಿದೆ. ಅಮೆರಿಕದಲ್ಲಿ ಗ್ರಾಹಕ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಂತಹ ಕಾನೂನು ಭಾರತದಲ್ಲಿ ತರುವ ಅಗತ್ಯವಿದೆ’ ಎಂದರು.</p>.<p>ಪ್ರಾಚಾರ್ಯೆ ಡಾ. ರೂಪಾ ಇಂಗಳಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಶ್ರೀಶೈಲ ಮುಧೋಳ, ಪ್ರೊ. ಬಾಬೂಲಾಲ ದರಗದ, ಪ್ರೊ. ದೀಪಾ ಪಾಟೀಲ, ಸುರೇಶ ಲಿಂಬಿಕಾಯಿ, ಆರ್.ಎಸ್. ಅವಧಾನಿ, ಸತೀಶ ಸಿ.ವಿ., ಬಿ. ಭರತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>