ರಾಜಕೀಯ ಪ್ರಯತ್ನ: ‘ಪಿಎಸ್ಐ ನೇಮಕಾತಿ ಹಗರಣದಲ್ಲಿ ಸರ್ಕಾರವೇ ಬೀಳುವಂತಹ ಕಿಂಗ್ಪಿನ್ ಇದ್ದಾರೆ ಎಂಬ ವಿಷಯ ಗೊತ್ತಿದ್ದವರು, ಮಾಹಿತಿ ನೀಡಲಿ. ಈ ವಿಷಯದಲ್ಲಿ ಕಾಂಗ್ರೆಸ್ ಅನಗತ್ಯವಾಗಿ ರಾಜಕೀಯ ಮಾಡುವ ಪ್ರಯತ್ನ ಮಾಡುತ್ತಿದೆ. ಆ ಪಕ್ಷದ ಬ್ಲಾಕ್ ಅಧ್ಯಕ್ಷ ಕೂಡ ಸಿಕ್ಕಿ ಬಿದ್ದಿದ್ದಾನೆ. ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿರುತ್ತಿದ್ದ ಆತ, ಚುನಾವಣೆಗೆ ನಿಲ್ಲಲು ತಯಾರಿ ನಡೆಸುತ್ತಿದ್ದ ಎನ್ನಲಾಗಿದೆ. ಹಗರಣದಲ್ಲಿ ಭಾಗಿಯಾಗಿರುವವರನ್ನು ಸಿಐಡಿ ಮುಲಾಜಿಲ್ಲದೆ ಬಂಧಿಸಿ ಕ್ರಮ ಕೈಗೊಳ್ಳುತ್ತಿದೆ. ಕೆಲವರು ಪ್ರಸಿದ್ಧಿಗಾಗಿ ಆರ್ಎಸ್ಸ್ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು.