<p><strong>ಕುಂದಗೋಳ</strong>: ‘ಸರಿಯಾದ ದಾಖಲೆಯಿಲ್ಲದೆ ಅಧಿಕಾರಿಗಳ ವಿರುದ್ಧ ಆರೋಪ ಮಾಡುವುದು ಸರಿಯಲ್ಲ. ಸುಳ್ಳು ಆರೋಪ ಮಾಡಿದರೆ ಪ್ರಕರಣ ದಾಖಲಾಗುವ ಸಾಧ್ಯತೆ ಇರುತ್ತದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ.ಎಸ್.ಭಾರತಿ ಹೇಳಿದರು. </p>.<p>ಕುಬಿಹಾಳದ ಗ್ರಾಮದ ಬಸವೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಶುಕ್ರವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕಿನ ಕುಬಿಹಾಳ ಗ್ರಾಮದ ಯುವಕನೊಬ್ಬ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆದಿದೆ. ಅನುದಾನ ತಡೆಹಿಡಿಯಬೇಕು ಹಾಗೂ ಇಚ್ಚಾಮರಣ ಕೊರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದನು. </p>.<p>ನ್ಯಾಯಾಧೀಶರು ಗ್ರಾಮದಲ್ಲಿ ಸಭೆ ನಡೆಸಿ, ಯುವಕನ ಸಮಸ್ಯೆಗಳನ್ನು ಆಲಿಸಿ, ಕಾನೂನಿನ ಅರಿವು ಮೂಡಿಸಿದರು.</p>.<p>‘ಆರೋಪಗಳಿಗೆ ಸರಿಯಾದ ದಾಖಲೆ ನೀಡುವಂತೆ ಯುವಕನಿಗೆ ನ್ಯಾಯಾಧೀಶರು ಸೂಚಿಸಿದರು. ಯುವಕ ದಾಖಲೆ ನೀಡಲಿಲ್ಲ. ಆರ್ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿ, ದಾಖಲೆ ಪಡೆದು ಸಲ್ಲಿಸುವಂತೆ ಸೂಚಿಸಿದರು. </p>.<p>‘ದೇಶದಲ್ಲಿರುವ ಸಮಸ್ಯೆಗಳಿಗೆ ಆತ್ಮಹತ್ಯೆ ಅಥವಾ ಇಚ್ಛಾಮರಣ ಪರಿಹಾರವಲ್ಲ. ಕಾನೂನಾತ್ಮಕ ಹೋರಾಟವೇ ಏಕೈಕ ಮಾರ್ಗ’ ಎಂದರು. </p>.<p>ಗ್ರಾಮಸ್ಥರು ಕೆರೆ ಅಭಿವೃದ್ದಿ, ಗಟಾರು ಸ್ವಚ್ಛತೆ ಸಮಸ್ಯೆ, ವಸತಿ ರಹಿತರಿಗೆ ದೊರೆಯದ ನಿವೇಶನ ಕುರಿತು ದೂರು ನೀಡಿದರು. ಆಗ ನ್ಯಾಯಾಧೀಶರು, ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಿ, ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. </p>.<p>ಮಳಲಿ ಗ್ರಾಮ ಪಂಚಾಯಿತಿಯ ನವಗ್ರಾಮದ ಸಮಸ್ಯೆಗಳನ್ನೂ ಪರಿಹರಿಸುವಂತೆ ಸೂಚಿಸಿದರು.</p>.<p>'ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು' ಎಂದು ಸೂಚಿಸಿದರು. </p>.<p>ಜಿ.ಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಭಾಗಿ, ಜಿ.ಪಂ.ಯೋಜನಾಧಿಕಾರಿ ದೀಪಕ್ ಮಡಿವಾಳರ, ತಹಶೀಲ್ದಾರ್ ರಾಜು ಮಾವರಕರ, ತಾ.ಪಂ ಇ.ಒ ಜಗದೀಶ ಕಮ್ಮಾರ, ಸಮೀರ ಮುಲ್ಲಾ, ಇಮ್ರಾನ್ ಪಠಾಣ ಹಾಗೂ ಕುಬಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಪಿಡಿಒಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಗೋಳ</strong>: ‘ಸರಿಯಾದ ದಾಖಲೆಯಿಲ್ಲದೆ ಅಧಿಕಾರಿಗಳ ವಿರುದ್ಧ ಆರೋಪ ಮಾಡುವುದು ಸರಿಯಲ್ಲ. ಸುಳ್ಳು ಆರೋಪ ಮಾಡಿದರೆ ಪ್ರಕರಣ ದಾಖಲಾಗುವ ಸಾಧ್ಯತೆ ಇರುತ್ತದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ.ಎಸ್.ಭಾರತಿ ಹೇಳಿದರು. </p>.<p>ಕುಬಿಹಾಳದ ಗ್ರಾಮದ ಬಸವೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಶುಕ್ರವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕಿನ ಕುಬಿಹಾಳ ಗ್ರಾಮದ ಯುವಕನೊಬ್ಬ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆದಿದೆ. ಅನುದಾನ ತಡೆಹಿಡಿಯಬೇಕು ಹಾಗೂ ಇಚ್ಚಾಮರಣ ಕೊರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದನು. </p>.<p>ನ್ಯಾಯಾಧೀಶರು ಗ್ರಾಮದಲ್ಲಿ ಸಭೆ ನಡೆಸಿ, ಯುವಕನ ಸಮಸ್ಯೆಗಳನ್ನು ಆಲಿಸಿ, ಕಾನೂನಿನ ಅರಿವು ಮೂಡಿಸಿದರು.</p>.<p>‘ಆರೋಪಗಳಿಗೆ ಸರಿಯಾದ ದಾಖಲೆ ನೀಡುವಂತೆ ಯುವಕನಿಗೆ ನ್ಯಾಯಾಧೀಶರು ಸೂಚಿಸಿದರು. ಯುವಕ ದಾಖಲೆ ನೀಡಲಿಲ್ಲ. ಆರ್ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿ, ದಾಖಲೆ ಪಡೆದು ಸಲ್ಲಿಸುವಂತೆ ಸೂಚಿಸಿದರು. </p>.<p>‘ದೇಶದಲ್ಲಿರುವ ಸಮಸ್ಯೆಗಳಿಗೆ ಆತ್ಮಹತ್ಯೆ ಅಥವಾ ಇಚ್ಛಾಮರಣ ಪರಿಹಾರವಲ್ಲ. ಕಾನೂನಾತ್ಮಕ ಹೋರಾಟವೇ ಏಕೈಕ ಮಾರ್ಗ’ ಎಂದರು. </p>.<p>ಗ್ರಾಮಸ್ಥರು ಕೆರೆ ಅಭಿವೃದ್ದಿ, ಗಟಾರು ಸ್ವಚ್ಛತೆ ಸಮಸ್ಯೆ, ವಸತಿ ರಹಿತರಿಗೆ ದೊರೆಯದ ನಿವೇಶನ ಕುರಿತು ದೂರು ನೀಡಿದರು. ಆಗ ನ್ಯಾಯಾಧೀಶರು, ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಿ, ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. </p>.<p>ಮಳಲಿ ಗ್ರಾಮ ಪಂಚಾಯಿತಿಯ ನವಗ್ರಾಮದ ಸಮಸ್ಯೆಗಳನ್ನೂ ಪರಿಹರಿಸುವಂತೆ ಸೂಚಿಸಿದರು.</p>.<p>'ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು' ಎಂದು ಸೂಚಿಸಿದರು. </p>.<p>ಜಿ.ಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಭಾಗಿ, ಜಿ.ಪಂ.ಯೋಜನಾಧಿಕಾರಿ ದೀಪಕ್ ಮಡಿವಾಳರ, ತಹಶೀಲ್ದಾರ್ ರಾಜು ಮಾವರಕರ, ತಾ.ಪಂ ಇ.ಒ ಜಗದೀಶ ಕಮ್ಮಾರ, ಸಮೀರ ಮುಲ್ಲಾ, ಇಮ್ರಾನ್ ಪಠಾಣ ಹಾಗೂ ಕುಬಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಪಿಡಿಒಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>