<p><strong>ಹುಬ್ಬಳ್ಳಿ:</strong> ರಾಜ್ಯಸಭೆಯಂತೆ ಸಾಮಾನ್ಯ ಕಾರ್ಯಕರ್ತರಿಗೂ ವಿಧಾನ ಪರಿಷತ್ ಟಿಕೆಟ್ ದೊರೆಯಬಹುದು ಎಂದು ಹಲವಾರು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಧಾರವಾಡ ಜಿಲ್ಲೆಯ ಹಲವು ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ.</p>.<p>ಪರಿಷತ್ ಪ್ರವೇಶಕ್ಕಾಗಿ ತಮ್ಮ ರಾಜಕೀಯ ನಾಯಕರ ಮೂಲಕ ಟಿಕೆಟ್ಗಾಗಿ ಲಾಬಿ ನಡೆಸಿದ್ದ ಜಿಲ್ಲೆಯ ಅರ್ಧ ಡಜನ್ಗೂ ಹೆಚ್ಚು ನಾಯಕರಿಗೆ ಟಿಕೆಟ್ ದೊರೆತಿಲ್ಲ. ವಲಸಿಗರಿಗೆ ಹಾಗೂ ಪಕ್ಷದ ಹಳೆಯ ಮುಖಗಳಿಗೆ ಮನ್ನಣೆ ನೀಡಲಾಗಿದೆ.</p>.<p>ಮುಂಬೈ ಕರ್ನಾಟಕ ಭಾಗದ ಆರ್. ಶಂಕರ್ ಅವರಿಗೆ ಮಾತ್ರ ಅವಕಾಶ ಸಿಕ್ಕಿದ್ದು, ಅವರಿಗೂ ವಿಧಾನಸಭೆಯ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರಲಿಲ್ಲ ಎಂಬ ಕಾಣರಕ್ಕೆ ನೀಡಲಾಗಿದೆ. ಜೊತೆಗೆ ಅವರು ಮೂಲತಃ ಬೆಂಗಳೂರಿನವರಾಗಿದ್ದಾರೆ.</p>.<p>ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಧಾರವಾಡ ವಿಭಾಗೀಯ ಪ್ರಭಾರಿ ಲಿಂಗರಾಜ ಪಾಟೀಲ, ಮುಖಂಡ ಶಂಕರಣ್ಣ ಮುನವಳ್ಳಿ, ಮಾಜಿ ಶಾಸಕರಾದ ಅಶೋಕ ಕಾಟವೆ, ಸೀಮಾ ಮಸೂತಿ, ಎಸ್.ಐ. ಚಿಕ್ಕನಗೌಡರ, ವೀರಭದ್ರಪ್ಪ ಹಾಲಹರವಿ ಸೇರಿದಂತೆ ಹಲವರು ಟಿಕೆಟ್ಗೆ ತೆರೆಮರೆಯಲ್ಲಿ ಪ್ರಯತ್ನ ನಡೆಸಿದ್ದರು.</p>.<p>ಮೂರು ದಶಕಗಳಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಲಿಂಗರಾಜ ಪಾಟೀಲ ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದು, ಈಗ ಧಾರವಾಡ ವಿಭಾಗೀಯ ಪ್ರಭಾರಿಯಾಗಿದ್ದಾರೆ. ಹಾಗಾಗಿ, ಪರಿಷತ್ಗೆ ಟಿಕೆಟ್ ಸಿಗಬಹುದು ಎಂದು ಅವರ ಬೆಂಬಲಿಗರು ಲೆಕ್ಕ ಹಾಕಿದ್ದರು.</p>.<p>ರಾಜ್ಯ ಕಾರ್ಯದರ್ಶಿ ಮಹೇಶ ಅವರಿಗೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಲಘಟಗಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಘೋಷಣೆಯಾಗಿತ್ತು. ಕೊನೆಗಳಿಗೆಯಲ್ಲಿ ಕೈ ತಪ್ಪಿತ್ತು. ಜೊತೆಗೆ ಅವರು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರ ಆಪ್ತಕೂಟದಲ್ಲಿದ್ದಾರೆ ಎನ್ನುವ ಕಾರಣಕ್ಕೆ ನಿರೀಕ್ಷೆಗಳು ಗರಿಗೆದರಿದ್ದವು. ಆದರೆ, ಈ ಲೆಕ್ಕಾಚಾರ ಕೈಕೊಟ್ಟಿದೆ.</p>.<p>ಕೆಎಲ್ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಹುಬ್ಬಳ್ಳಿಯ ಪೂರ್ವ ವಿಧಾನಸಭಾ ಕ್ಷೇತ್ರದ ಟಿಕೆಟ್ ತಪ್ಪಿಸಿಕೊಂಡಿದ್ದ ವೀರಭದ್ರಪ್ಪ ಹಾಲಹರವಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಬಂಧಿ ಎಸ್.ಐ. ಚಿಕ್ಕನಗೌಡರ ಸೇರಿದಂತೆ ಹಲವರು ಯತ್ನ ನಡೆಸಿದ್ದರು.</p>.<p>ವಿಧಾನಸಭೆಯಿಂದ ವಿಧಾನ ಪರಿಷತ್ ಪ್ರವೇಶ ಪಡೆಯುವ ಕನಸು ಭಗ್ನಗೊಂಡಿದೆ. ಮುಂದಿನ ದಿನಗಳಲ್ಲಿ ಐವರನ್ನು ನಾಮ ನಿರ್ದೇಶನ ಮಾಡಬೇಕಿದೆ. ಆಗಲಾದರೂ, ಅವಕಾಶ ಸಿಗಬಹುದು ಎಂದು ಕಾಯುತ್ತಿದ್ದಾರೆ ಈ ಭಾಗದ ನಾಯಕರು.</p>.<p>ಉತ್ತರ ಕರ್ನಾಟಕ ಭಾಗದವರಿಗೆ ಅವಕಾಶ ನೀಡಬೇಕು ಎಂಬ ಕೂಗು ಜೆಡಿಎಸ್ನಲ್ಲಿ ಕೇಳಿ ಬಂದಿತ್ತು. ತಮಗೆ ಅವಕಾಶ ನಿಡಬೇಕು ಎಂದು ರಾಜ್ಯ ಘಟಕದ ಉಪಾಧ್ಯಕ್ಷ ಗುರುರಾಜ ಹುಣಸಿಮರದ ಆಗ್ರಹಿಸಿದ್ದರು. ಆದರೆ, ಆ ಪಕ್ಷದ ನಾಯಕರು ಇತ್ತ ತಿರುಗಿ ನೋಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ರಾಜ್ಯಸಭೆಯಂತೆ ಸಾಮಾನ್ಯ ಕಾರ್ಯಕರ್ತರಿಗೂ ವಿಧಾನ ಪರಿಷತ್ ಟಿಕೆಟ್ ದೊರೆಯಬಹುದು ಎಂದು ಹಲವಾರು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಧಾರವಾಡ ಜಿಲ್ಲೆಯ ಹಲವು ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ.</p>.<p>ಪರಿಷತ್ ಪ್ರವೇಶಕ್ಕಾಗಿ ತಮ್ಮ ರಾಜಕೀಯ ನಾಯಕರ ಮೂಲಕ ಟಿಕೆಟ್ಗಾಗಿ ಲಾಬಿ ನಡೆಸಿದ್ದ ಜಿಲ್ಲೆಯ ಅರ್ಧ ಡಜನ್ಗೂ ಹೆಚ್ಚು ನಾಯಕರಿಗೆ ಟಿಕೆಟ್ ದೊರೆತಿಲ್ಲ. ವಲಸಿಗರಿಗೆ ಹಾಗೂ ಪಕ್ಷದ ಹಳೆಯ ಮುಖಗಳಿಗೆ ಮನ್ನಣೆ ನೀಡಲಾಗಿದೆ.</p>.<p>ಮುಂಬೈ ಕರ್ನಾಟಕ ಭಾಗದ ಆರ್. ಶಂಕರ್ ಅವರಿಗೆ ಮಾತ್ರ ಅವಕಾಶ ಸಿಕ್ಕಿದ್ದು, ಅವರಿಗೂ ವಿಧಾನಸಭೆಯ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರಲಿಲ್ಲ ಎಂಬ ಕಾಣರಕ್ಕೆ ನೀಡಲಾಗಿದೆ. ಜೊತೆಗೆ ಅವರು ಮೂಲತಃ ಬೆಂಗಳೂರಿನವರಾಗಿದ್ದಾರೆ.</p>.<p>ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಧಾರವಾಡ ವಿಭಾಗೀಯ ಪ್ರಭಾರಿ ಲಿಂಗರಾಜ ಪಾಟೀಲ, ಮುಖಂಡ ಶಂಕರಣ್ಣ ಮುನವಳ್ಳಿ, ಮಾಜಿ ಶಾಸಕರಾದ ಅಶೋಕ ಕಾಟವೆ, ಸೀಮಾ ಮಸೂತಿ, ಎಸ್.ಐ. ಚಿಕ್ಕನಗೌಡರ, ವೀರಭದ್ರಪ್ಪ ಹಾಲಹರವಿ ಸೇರಿದಂತೆ ಹಲವರು ಟಿಕೆಟ್ಗೆ ತೆರೆಮರೆಯಲ್ಲಿ ಪ್ರಯತ್ನ ನಡೆಸಿದ್ದರು.</p>.<p>ಮೂರು ದಶಕಗಳಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಲಿಂಗರಾಜ ಪಾಟೀಲ ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದು, ಈಗ ಧಾರವಾಡ ವಿಭಾಗೀಯ ಪ್ರಭಾರಿಯಾಗಿದ್ದಾರೆ. ಹಾಗಾಗಿ, ಪರಿಷತ್ಗೆ ಟಿಕೆಟ್ ಸಿಗಬಹುದು ಎಂದು ಅವರ ಬೆಂಬಲಿಗರು ಲೆಕ್ಕ ಹಾಕಿದ್ದರು.</p>.<p>ರಾಜ್ಯ ಕಾರ್ಯದರ್ಶಿ ಮಹೇಶ ಅವರಿಗೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಲಘಟಗಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಘೋಷಣೆಯಾಗಿತ್ತು. ಕೊನೆಗಳಿಗೆಯಲ್ಲಿ ಕೈ ತಪ್ಪಿತ್ತು. ಜೊತೆಗೆ ಅವರು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರ ಆಪ್ತಕೂಟದಲ್ಲಿದ್ದಾರೆ ಎನ್ನುವ ಕಾರಣಕ್ಕೆ ನಿರೀಕ್ಷೆಗಳು ಗರಿಗೆದರಿದ್ದವು. ಆದರೆ, ಈ ಲೆಕ್ಕಾಚಾರ ಕೈಕೊಟ್ಟಿದೆ.</p>.<p>ಕೆಎಲ್ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಹುಬ್ಬಳ್ಳಿಯ ಪೂರ್ವ ವಿಧಾನಸಭಾ ಕ್ಷೇತ್ರದ ಟಿಕೆಟ್ ತಪ್ಪಿಸಿಕೊಂಡಿದ್ದ ವೀರಭದ್ರಪ್ಪ ಹಾಲಹರವಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಬಂಧಿ ಎಸ್.ಐ. ಚಿಕ್ಕನಗೌಡರ ಸೇರಿದಂತೆ ಹಲವರು ಯತ್ನ ನಡೆಸಿದ್ದರು.</p>.<p>ವಿಧಾನಸಭೆಯಿಂದ ವಿಧಾನ ಪರಿಷತ್ ಪ್ರವೇಶ ಪಡೆಯುವ ಕನಸು ಭಗ್ನಗೊಂಡಿದೆ. ಮುಂದಿನ ದಿನಗಳಲ್ಲಿ ಐವರನ್ನು ನಾಮ ನಿರ್ದೇಶನ ಮಾಡಬೇಕಿದೆ. ಆಗಲಾದರೂ, ಅವಕಾಶ ಸಿಗಬಹುದು ಎಂದು ಕಾಯುತ್ತಿದ್ದಾರೆ ಈ ಭಾಗದ ನಾಯಕರು.</p>.<p>ಉತ್ತರ ಕರ್ನಾಟಕ ಭಾಗದವರಿಗೆ ಅವಕಾಶ ನೀಡಬೇಕು ಎಂಬ ಕೂಗು ಜೆಡಿಎಸ್ನಲ್ಲಿ ಕೇಳಿ ಬಂದಿತ್ತು. ತಮಗೆ ಅವಕಾಶ ನಿಡಬೇಕು ಎಂದು ರಾಜ್ಯ ಘಟಕದ ಉಪಾಧ್ಯಕ್ಷ ಗುರುರಾಜ ಹುಣಸಿಮರದ ಆಗ್ರಹಿಸಿದ್ದರು. ಆದರೆ, ಆ ಪಕ್ಷದ ನಾಯಕರು ಇತ್ತ ತಿರುಗಿ ನೋಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>