<p><strong>ಹುಬ್ಬಳ್ಳಿ:</strong> ನಗರದ ಹೊರವಲಯದ ವಿಮಾನ ನಿಲ್ದಾಣ ರಸ್ತೆ ಮತ್ತು ಗಾಮನಗಟ್ಟಿ ಮಧ್ಯದ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.</p>.<p>ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಚಿರತೆಯ ಚಲನವಲನ ಗಮನಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದ್ದಾರೆ. ಸಾರ್ವಜನಿಕರು ಸಂಚರಿಸುವಾಗ ಜಾಗೃತರಾಗಿರಬೇಕು ಎಂದು ಅರಣ್ಯ ಇಲಾಖೆ ಸೂಚನೆ ನೀಡಿದೆ. ವಿಮಾನ ನಿಲ್ದಾಣದ ಕಾಂಪೌಂಡ್ ಮೇಲೆ ಚಿರತೆ ಕುಳಿತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿದೆ.</p>.<p>ಈ ಕುರಿತು ಮಾಹಿತಿ ನೀಡಿದ ಆರ್ಎಫ್ಒ ಆರ್.ಎಸ್. ಉಪ್ಪಾರ, ‘ಮೂರ್ನಾಲ್ಕು ದಿನಗಳಿಂದ ಈ ಭಾಗದಲ್ಲಿ ಚಿರತೆ ಓಡಾಡುತ್ತಿರುವುದನ್ನು ಕೆಲವರು ನೋಡಿದ್ದಾರೆ. ಅದು ಒಮ್ಮೊಮ್ಮೆ ವಿಮಾನ ನಿಲ್ದಾಣದ ಆವರಣಕ್ಕೂ ಪ್ರವೇಶಿಸಿದೆ. ಇಲಾಖೆಯ ಸಿಬ್ಬಂದಿಯನ್ನು ಅಲ್ಲಿ ನಿಯೋಜಿಸಲಾಗಿದ್ದು, ಅವರು ನಿಗಾ ವಹಿಸಿದ್ದಾರೆ’ ಎಂದರು.</p>.<p>‘ಮುನ್ನೆಚ್ಚರಿಕೆ ಕ್ರಮವಾಗಿ ಈ ಭಾಗದಲ್ಲಿ ಒಡಾಡುವವರಿಗೆ ಚಿರತೆ ಸಂಚಾರದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ದೇವರಗುಡಿಹಾಳ ಬಳಿಯ ಅರಣ್ಯ ಪ್ರದೇಶದಿಂದ ಚಿರತೆ ಬಂದಿರಬಹುದು ಎಂದು ಊಹಿಸಲಾಗಿದೆ. ಒಂದೆರಡು ದಿನಗಳಲ್ಲಿ ನಗರ ಬಿಟ್ಟು ಹೋಗುವ ಸಾಧ್ಯತೆ ಇದೆ. ಹೋಗದಿದ್ದರೆ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ನಗರದ ಹೊರವಲಯದ ವಿಮಾನ ನಿಲ್ದಾಣ ರಸ್ತೆ ಮತ್ತು ಗಾಮನಗಟ್ಟಿ ಮಧ್ಯದ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.</p>.<p>ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಚಿರತೆಯ ಚಲನವಲನ ಗಮನಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದ್ದಾರೆ. ಸಾರ್ವಜನಿಕರು ಸಂಚರಿಸುವಾಗ ಜಾಗೃತರಾಗಿರಬೇಕು ಎಂದು ಅರಣ್ಯ ಇಲಾಖೆ ಸೂಚನೆ ನೀಡಿದೆ. ವಿಮಾನ ನಿಲ್ದಾಣದ ಕಾಂಪೌಂಡ್ ಮೇಲೆ ಚಿರತೆ ಕುಳಿತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿದೆ.</p>.<p>ಈ ಕುರಿತು ಮಾಹಿತಿ ನೀಡಿದ ಆರ್ಎಫ್ಒ ಆರ್.ಎಸ್. ಉಪ್ಪಾರ, ‘ಮೂರ್ನಾಲ್ಕು ದಿನಗಳಿಂದ ಈ ಭಾಗದಲ್ಲಿ ಚಿರತೆ ಓಡಾಡುತ್ತಿರುವುದನ್ನು ಕೆಲವರು ನೋಡಿದ್ದಾರೆ. ಅದು ಒಮ್ಮೊಮ್ಮೆ ವಿಮಾನ ನಿಲ್ದಾಣದ ಆವರಣಕ್ಕೂ ಪ್ರವೇಶಿಸಿದೆ. ಇಲಾಖೆಯ ಸಿಬ್ಬಂದಿಯನ್ನು ಅಲ್ಲಿ ನಿಯೋಜಿಸಲಾಗಿದ್ದು, ಅವರು ನಿಗಾ ವಹಿಸಿದ್ದಾರೆ’ ಎಂದರು.</p>.<p>‘ಮುನ್ನೆಚ್ಚರಿಕೆ ಕ್ರಮವಾಗಿ ಈ ಭಾಗದಲ್ಲಿ ಒಡಾಡುವವರಿಗೆ ಚಿರತೆ ಸಂಚಾರದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ದೇವರಗುಡಿಹಾಳ ಬಳಿಯ ಅರಣ್ಯ ಪ್ರದೇಶದಿಂದ ಚಿರತೆ ಬಂದಿರಬಹುದು ಎಂದು ಊಹಿಸಲಾಗಿದೆ. ಒಂದೆರಡು ದಿನಗಳಲ್ಲಿ ನಗರ ಬಿಟ್ಟು ಹೋಗುವ ಸಾಧ್ಯತೆ ಇದೆ. ಹೋಗದಿದ್ದರೆ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>