ಸೆಪಕ್ಟಕ್ರಾ ಕೋಚ್ ಪಿ. ಮಂಜುನಾಥ, 2019ನೇ ಸಾಲಿನ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪಡೆದ ಭಾರತ ಅಟ್ಯಾ ಪಟ್ಯಾ ತಂಡದ ಆಟಗಾರ್ತಿ ಹುಬ್ಬಳ್ಳಿಯ ಅನಿತಾ ಬಿಚಗತ್ತಿ, ಅಥ್ಲೀಟ್ ನಾಗರಾಜ ಕುಡಬಾವಿ, ವಾಲಿಬಾಲ್ ಆಟಗಾರ ಅಮನ್ ಕುಸುಗಲ್ ಅವರನ್ನು ಸನ್ಮಾನಿಸಲಾಯಿತು. ಅಕಾಡೆಮಿಯ ಮುಖ್ಯಸ್ಥ ವಿಲಾಸ ನೀಲಗುಂದ, ಕ್ರಿಕೆಟ್ ಕೋಚ್ ನಿತಿನ್ ಭಿಲ್ಲೆ, ಮಾಸ್ಟರ್ ಅಥ್ಲೀಟ್ ನಂದಾ ಕಲ್ಲೂರ ಹಾಗೂ ಸಿ.ಬಿ. ಕಲ್ಲೂರ ಪಾಲ್ಗೊಂಡಿದ್ದರು.