’ಬ್ರಾಹ್ಮಣ ಸಮಾಜದವರ ಅಭಿವೃದ್ಧಿಗಾಗಿ ಎಸ್ಸೆಸ್ಸೆಲ್ಸಿ ಪೂರ್ವ ಮತ್ತು ನಂತರದ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ ನೀಡುವುದು, ವೇದಾಧ್ಯಯನ ಹಾಗೂ ಸಂಸ್ಕೃತ ಕಲಿಯವವರಿಗೆ ಶಿಷ್ಯವೇತನ, ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿಗಳ ವಸತಿ ನಿಲಯಗಳ ನಿರ್ಮಾಣಕ್ಕೆ ಸನ್ನಿಧಿ ಯೋಜನೆ, ಕರಕುಶಲ ತಯಾರಿಕೆ, ಗುಡಿ ಕೈಗಾರಿಕೆ, ಹೂ ಬತ್ತಿ ಮಾಡುವ ಮಹಿಳೆಯರಿಗೆ ಉದ್ಯೋಗ ಮೇಳಗಳನ್ನು ಆಯೋಜಿಸುವುದು, ಬ್ರಾಹ್ಮಣ ಸ್ವಸಹಾಯ ಸಂಘಗಳ ಸ್ಥಾಪನೆ, ಅನಾಥ, ಅಂಗವಿಕಲ, ವಿಧವೆ ಮಹಿಳೆಯರಿಗೆ ಮಾಸಿಕ ಪಿಂಚಣಿ ನೀಡುವ ಯೋಜನೆಗಳನ್ನು ರೂಪಿಸಲಾಗಿದೆ. ಅಕ್ಟೋಬರ್ ವೇಳೆಗೆ ಇವುಗಳನ್ನು ಅನುಷ್ಠಾನಗೊಳಿಸಲಾಗುವುದು’ ಎಂದು ತಿಳಿಸಿದರು.