ಕಾಯಕ ಸಮಾಜಗಳ ಒಕ್ಕೂಟವು ಅತಿ ಹಿಂದುಳಿದ ವರ್ಗಗಳ ಜನರ ಧ್ವನಿಯಾಗಿ ಹಾಗೂ ಅವರ ಮೀಸಲಾತಿ ಸಂರಕ್ಷಣೆಗಾಗಿ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದೆ. ನಮ್ಮ ಹೋರಾಟ ಯಾವುದೇ ಸಮಾಜದ ವಿರುದ್ಧವಲ್ಲ. ಆದರೆ, ಕೂಡಲ ಸಂಗಮ ಸ್ವಾಮೀಜಿ ಭಕ್ತರು, ವೈಯಕ್ತಿಕವಾಗಿ ಪರಿಗಣಿಸಿ ನಮಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.