<p><strong>ಹುಬ್ಬಳ್ಳಿ:</strong> ‘ರಾಜ್ಯ ಸರ್ಕಾರ ನಡೆಸುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿ ಕಾಲಂನಲ್ಲಿ ಸಮುದಾಯದವರು ‘ಲಿಂಗಾಯತ ರಡ್ಡಿ’ ಎಂದೇ ಬರೆಸಬೇಕು’ ಎಂದು ರಾಜ್ಯ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರಡ್ಡಿ ಸಮಾಜದ ಗೌರವಾಧ್ಯಕ್ಷ ಜಿ.ಎಸ್.ಪಾಟೀಲ ತಿಳಿಸಿದರು.</p>.<p>‘ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ. ಲಿಂಗಾಯತ ರಡ್ಡಿ ಎಂದು ಬರೆಸುವ ಸಂಬಂಧ ಸಮುದಾಯದ ರಾಜ್ಯಮಟ್ಟದ ಪದಾಧಿಕಾರಿಗಳು ಮತ್ತು ಪ್ರಮುಖರ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸಲಾಗಿದೆ’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಸಮುದಾಯದ ಪ್ರಗತಿಗೆ ನಾಲ್ಕು ಕಂದಾಯ ವಿಭಾಗಗಳಲ್ಲೂ ನಿವೇಶನ ಖರೀದಿಸಿ, ಮಕ್ಕಳಿಗಾಗಿ ಹಾಸ್ಟೆಲ್ ನಿರ್ಮಿಸುತ್ತೇವೆ. ಹುಬ್ಬಳ್ಳಿಯಲ್ಲಿ ಸಹಕಾರ ಬ್ಯಾಂಕ್ ಸ್ಥಾಪಿಸುತ್ತೇವೆ’ ಎಂದರು.</p>.<p>ಶಾಸಕ ಸಿ.ಎಸ್.ನಾಡಗೌಡ ಅವರು, ‘ವೀರಶೈವ–ಲಿಂಗಾಯತ, ಪ್ರತ್ಯೇಕ ಧರ್ಮ ವ್ಯಾಜ್ಯಕ್ಕೆ ನಾವು ಹೋಗಲ್ಲ. ಇರುವ ಸ್ಥಾನ ಉಳಿಸಿಕೊಳ್ಳಲು ಕಾರ್ಯಚಟುವಟಿಕೆ ಹಮ್ಮಿಕೊಳ್ಳುತ್ತೇವೆ’ ಎಂದರು.</p>.<p>ಶಾಸಕರಾದ ಬಸವರಾಜ ರಾಯರಡ್ಡಿ, ಎಸ್.ಆರ್. ಪಾಟೀಲ, ಹಂಪನಗೌಡ ಬಾದರ್ಲಿ, ಶರಣಗೌಡ ಕಂದಕೂರ, ಅಮರೇಗೌಡ ಬಯ್ಯಾಪುರ, ಸಂಘಟನೆಯ ಅಧ್ಯಕ್ಷ ಶೇಖರಗೌಡ ಪಾಟೀಲ, ಯುವ ಘಟಕದ ರಾಜ್ಯ ಅಧ್ಯಕ್ಷ ಅನಿಲಕುಮಾರ ತೆಗ್ಗಿನಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ರಾಜ್ಯ ಸರ್ಕಾರ ನಡೆಸುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿ ಕಾಲಂನಲ್ಲಿ ಸಮುದಾಯದವರು ‘ಲಿಂಗಾಯತ ರಡ್ಡಿ’ ಎಂದೇ ಬರೆಸಬೇಕು’ ಎಂದು ರಾಜ್ಯ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರಡ್ಡಿ ಸಮಾಜದ ಗೌರವಾಧ್ಯಕ್ಷ ಜಿ.ಎಸ್.ಪಾಟೀಲ ತಿಳಿಸಿದರು.</p>.<p>‘ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ. ಲಿಂಗಾಯತ ರಡ್ಡಿ ಎಂದು ಬರೆಸುವ ಸಂಬಂಧ ಸಮುದಾಯದ ರಾಜ್ಯಮಟ್ಟದ ಪದಾಧಿಕಾರಿಗಳು ಮತ್ತು ಪ್ರಮುಖರ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸಲಾಗಿದೆ’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಸಮುದಾಯದ ಪ್ರಗತಿಗೆ ನಾಲ್ಕು ಕಂದಾಯ ವಿಭಾಗಗಳಲ್ಲೂ ನಿವೇಶನ ಖರೀದಿಸಿ, ಮಕ್ಕಳಿಗಾಗಿ ಹಾಸ್ಟೆಲ್ ನಿರ್ಮಿಸುತ್ತೇವೆ. ಹುಬ್ಬಳ್ಳಿಯಲ್ಲಿ ಸಹಕಾರ ಬ್ಯಾಂಕ್ ಸ್ಥಾಪಿಸುತ್ತೇವೆ’ ಎಂದರು.</p>.<p>ಶಾಸಕ ಸಿ.ಎಸ್.ನಾಡಗೌಡ ಅವರು, ‘ವೀರಶೈವ–ಲಿಂಗಾಯತ, ಪ್ರತ್ಯೇಕ ಧರ್ಮ ವ್ಯಾಜ್ಯಕ್ಕೆ ನಾವು ಹೋಗಲ್ಲ. ಇರುವ ಸ್ಥಾನ ಉಳಿಸಿಕೊಳ್ಳಲು ಕಾರ್ಯಚಟುವಟಿಕೆ ಹಮ್ಮಿಕೊಳ್ಳುತ್ತೇವೆ’ ಎಂದರು.</p>.<p>ಶಾಸಕರಾದ ಬಸವರಾಜ ರಾಯರಡ್ಡಿ, ಎಸ್.ಆರ್. ಪಾಟೀಲ, ಹಂಪನಗೌಡ ಬಾದರ್ಲಿ, ಶರಣಗೌಡ ಕಂದಕೂರ, ಅಮರೇಗೌಡ ಬಯ್ಯಾಪುರ, ಸಂಘಟನೆಯ ಅಧ್ಯಕ್ಷ ಶೇಖರಗೌಡ ಪಾಟೀಲ, ಯುವ ಘಟಕದ ರಾಜ್ಯ ಅಧ್ಯಕ್ಷ ಅನಿಲಕುಮಾರ ತೆಗ್ಗಿನಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>