<p><strong>ಹುಬ್ಬಳ್ಳಿ</strong>: ‘ವೀರಶೈವ– ಲಿಂಗಾಯತ ಒಂದೇ ಎಂದು ನಂಬಿರುವ ವಿವಿಧ ಮಠಾಧೀಶರು, ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾದ ಮುಖಂಡರು ಸೆ.11ರಂದು ಬೆಂಗಳೂರಿನಲ್ಲಿ ಸಭೆ ಸೇರುವರು.</p>.<p>‘ಜಾತಿ, ಉಪಜಾತಿ ಕಾಲಂನಲ್ಲಿ ಸಮಾಜದವರು ಏನು ನಮೂದಿಸಬೇಕು ಎಂದು ಸಭೆ ನಿರ್ಧರಿಸಲಿದೆ’ ಎಂದು ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಸೋಮವಾರ ಇಲ್ಲಿ ತಿಳಿಸಿದರು.</p>.<p>‘ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆಯಲ್ಲಿ ಜಾತಿ, ಉಪ ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂದು ಸಮಾಜದವರಲ್ಲಿ ಗೊಂದಲವಿದೆ ಇದನ್ನು ನಿವಾರಿಸುವುದು ಉದ್ದೇಶ’ ಎಂದು ತಿಳಿಸಿದರು.</p>.<div><blockquote>ನನ್ನನ್ನೂ ಸೇರಿ ನಾಡಿನ ಯಾವೊಬ್ಬ ಸ್ವಾಮೀಜಿ ವಿದ್ವಾಂಸ ನಾಯಕರೂ ಬಸವಣ್ಣ ಪ್ರತಿಪಾದಿಸಿದ ಬಸವತತ್ವ ಪಾಲಿಸುತ್ತಿಲ್ಲ. ಪ್ರಚಾರ ರಾಜಕೀಯಕ್ಕೆ ಇದು ಬಳಕೆಯಾಗುತ್ತಿದೆ </blockquote><span class="attribution">ವೀರಭದ್ರ ಚನ್ನಮಲ್ಲ, ಸ್ವಾಮೀಜಿ ನಿಡುಮಾಮಿಡಿ ಮಠ</span></div>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವೀರಶೈವ, ಲಿಂಗಾಯತ ಎರಡೂ ಒಂದೇ ಎಂದು ಪಂಚಪೀಠಾಧೀಶರು ಸಹಮತ ವ್ಯಕ್ತಪಡಿಸಿರುವುದು ಸ್ವಾಗತಾರ್ಹ. ಆದರೆ, ಕೆಲವರು ಬಸವ ಸಂಸ್ಕೃತಿ ಯಾತ್ರೆಯ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>ಯಾತ್ರೆಯ ನೇತೃತ್ವ ವಹಿಸಿರುವ ತೋಂಟದ ಸಿದ್ದರಾಮ ಸ್ವಾಮೀಜಿ, ಮಠದ ಅಡಿ ಮೂರು ವೈದಿಕ ಪಾಠಶಾಲೆ ನಡೆಸುತ್ತಿದ್ದಾರೆ. ಅವರ ನಡೆ–ನುಡಿಯಲ್ಲಿ ಹೋಲಿಕೆ ಇಲ್ಲ. ಬಸವ ಸಂಸ್ಕೃತಿ ಯಾತ್ರೆ ವೇದಿಕೆಗೆ ಕೆಲ ಸ್ವಾಮೀಜಿಗಳನ್ನು ಹೆದರಿಸಿ, ಬೆದರಿಸಿ ಕರೆತರುತ್ತಿದ್ದಾರೆ’ ಎಂದೂ ಆರೋಪಿಸಿದರು.</p>.<p><strong>‘ಹಿಂದೂ ಧರ್ಮದ ವಿರೋಧಿ ಆಗಬೇಕಿಲ್ಲ’ </strong></p><p>ವಿಜಯಪುರ: ‘ವೀರಶೈವ ಲಿಂಗಾಯತ ಹಿಂದೂ ಧರ್ಮದ ಅಂಗವಲ್ಲ. ಇದು ಸ್ವತಂತ್ರ ಧರ್ಮ. ಅಸ್ಮಿತೆ ಸಿದ್ಧಾಂತ ಆಚರಣೆಗೆ ಸ್ವತಂತ್ರ ಧರ್ಮದವರಾಗಬೇಕೇ ಹೊರತು ಹಿಂದೂ ಧರ್ಮದ ವಿರೋಧಿಗಳಾಗಬೇಕಿಲ್ಲ’ ಎಂದು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹೇಳಿದರು. </p><p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ‘ಪ್ರತ್ಯೇಕ ಧರ್ಮ ಮಾನ್ಯತೆಯನ್ನು ವೀರಶೈವ ಲಿಂಗಾಯತರು ಒಟ್ಟುಗೂಡಿಯೇ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು. ‘ಕೇಂದ್ರ ಸರ್ಕಾರ ಜಾತಿ ಗಣತಿ ಆರಂಭಿಸುವ ಮುನ್ನವೇ ವೀರಶೈವ–ಲಿಂಗಾಯತರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ವೀರಶೈವ ಲಿಂಗಾಯತ ಮಹಾಸಭೆ ಶ್ರಮಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ವೀರಶೈವ– ಲಿಂಗಾಯತ ಒಂದೇ ಎಂದು ನಂಬಿರುವ ವಿವಿಧ ಮಠಾಧೀಶರು, ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾದ ಮುಖಂಡರು ಸೆ.11ರಂದು ಬೆಂಗಳೂರಿನಲ್ಲಿ ಸಭೆ ಸೇರುವರು.</p>.<p>‘ಜಾತಿ, ಉಪಜಾತಿ ಕಾಲಂನಲ್ಲಿ ಸಮಾಜದವರು ಏನು ನಮೂದಿಸಬೇಕು ಎಂದು ಸಭೆ ನಿರ್ಧರಿಸಲಿದೆ’ ಎಂದು ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಸೋಮವಾರ ಇಲ್ಲಿ ತಿಳಿಸಿದರು.</p>.<p>‘ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆಯಲ್ಲಿ ಜಾತಿ, ಉಪ ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂದು ಸಮಾಜದವರಲ್ಲಿ ಗೊಂದಲವಿದೆ ಇದನ್ನು ನಿವಾರಿಸುವುದು ಉದ್ದೇಶ’ ಎಂದು ತಿಳಿಸಿದರು.</p>.<div><blockquote>ನನ್ನನ್ನೂ ಸೇರಿ ನಾಡಿನ ಯಾವೊಬ್ಬ ಸ್ವಾಮೀಜಿ ವಿದ್ವಾಂಸ ನಾಯಕರೂ ಬಸವಣ್ಣ ಪ್ರತಿಪಾದಿಸಿದ ಬಸವತತ್ವ ಪಾಲಿಸುತ್ತಿಲ್ಲ. ಪ್ರಚಾರ ರಾಜಕೀಯಕ್ಕೆ ಇದು ಬಳಕೆಯಾಗುತ್ತಿದೆ </blockquote><span class="attribution">ವೀರಭದ್ರ ಚನ್ನಮಲ್ಲ, ಸ್ವಾಮೀಜಿ ನಿಡುಮಾಮಿಡಿ ಮಠ</span></div>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವೀರಶೈವ, ಲಿಂಗಾಯತ ಎರಡೂ ಒಂದೇ ಎಂದು ಪಂಚಪೀಠಾಧೀಶರು ಸಹಮತ ವ್ಯಕ್ತಪಡಿಸಿರುವುದು ಸ್ವಾಗತಾರ್ಹ. ಆದರೆ, ಕೆಲವರು ಬಸವ ಸಂಸ್ಕೃತಿ ಯಾತ್ರೆಯ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>ಯಾತ್ರೆಯ ನೇತೃತ್ವ ವಹಿಸಿರುವ ತೋಂಟದ ಸಿದ್ದರಾಮ ಸ್ವಾಮೀಜಿ, ಮಠದ ಅಡಿ ಮೂರು ವೈದಿಕ ಪಾಠಶಾಲೆ ನಡೆಸುತ್ತಿದ್ದಾರೆ. ಅವರ ನಡೆ–ನುಡಿಯಲ್ಲಿ ಹೋಲಿಕೆ ಇಲ್ಲ. ಬಸವ ಸಂಸ್ಕೃತಿ ಯಾತ್ರೆ ವೇದಿಕೆಗೆ ಕೆಲ ಸ್ವಾಮೀಜಿಗಳನ್ನು ಹೆದರಿಸಿ, ಬೆದರಿಸಿ ಕರೆತರುತ್ತಿದ್ದಾರೆ’ ಎಂದೂ ಆರೋಪಿಸಿದರು.</p>.<p><strong>‘ಹಿಂದೂ ಧರ್ಮದ ವಿರೋಧಿ ಆಗಬೇಕಿಲ್ಲ’ </strong></p><p>ವಿಜಯಪುರ: ‘ವೀರಶೈವ ಲಿಂಗಾಯತ ಹಿಂದೂ ಧರ್ಮದ ಅಂಗವಲ್ಲ. ಇದು ಸ್ವತಂತ್ರ ಧರ್ಮ. ಅಸ್ಮಿತೆ ಸಿದ್ಧಾಂತ ಆಚರಣೆಗೆ ಸ್ವತಂತ್ರ ಧರ್ಮದವರಾಗಬೇಕೇ ಹೊರತು ಹಿಂದೂ ಧರ್ಮದ ವಿರೋಧಿಗಳಾಗಬೇಕಿಲ್ಲ’ ಎಂದು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹೇಳಿದರು. </p><p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ‘ಪ್ರತ್ಯೇಕ ಧರ್ಮ ಮಾನ್ಯತೆಯನ್ನು ವೀರಶೈವ ಲಿಂಗಾಯತರು ಒಟ್ಟುಗೂಡಿಯೇ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು. ‘ಕೇಂದ್ರ ಸರ್ಕಾರ ಜಾತಿ ಗಣತಿ ಆರಂಭಿಸುವ ಮುನ್ನವೇ ವೀರಶೈವ–ಲಿಂಗಾಯತರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ವೀರಶೈವ ಲಿಂಗಾಯತ ಮಹಾಸಭೆ ಶ್ರಮಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>