<p><strong>ಹುಬ್ಬಳ್ಳಿ: ‘</strong>ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಜೂನ್ 7 ರಂದು ಅಧಿಕಾರ ವಹಿಸಿಕೊಳ್ಳಲಿದ್ದು, ಕಾರ್ಯಕ್ರಮ ವೀಕ್ಷಣೆಗೆ ರಾಜ್ಯದ 8 ಸಾವಿರ ಕಡೆಗಳಲ್ಲಿ ಎಲ್ಇಡಿ ಸ್ಕ್ರೀನ್ ಅಳವಡಿಸಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.</p>.<p>ಗುರುವಾರ ಪಕ್ಷದ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಮಾರಂಭ ಸರಳವಾಗಿ ನಡೆಯಲಿದೆ. ಪಕ್ಷದ ಕಾರ್ಯಕರ್ತರಿಗೆ ವೀಕ್ಷಣೆಗಾಗಿ ವ್ಯವಸ್ಥೆ ಮಾಡಲಿದ್ದು, 4 ಲಕ್ಷ ಜನ ವೀಕ್ಷಿಸಲಿದ್ದಾರೆ’ ಎಂದರು.</p>.<p>‘ರಾಜ್ಯದಾದ್ಯಂತ ಎಲ್ಲ ಗ್ರಾಮ ಪಂಚಾಯ್ತಿಯಿಂದ ಹಿಡಿದು ಜಿಲ್ಲಾ ಮಟ್ಟದವರೆಗೆ ವೀಕ್ಷಣೆಗೆ ಅವಕಾಶ ಮಾಡಲಾಗುವುದು. ವ್ಯವಸ್ಥೆ ಮಾಡುವಂತೆ ಎಲ್ಲ ಕ್ಷೇತ್ರಗಳ ನಾಯಕರಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.</p>.<p>‘ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮೇಲ್ವಿಚಾರಣೆಗೆ ವೀಕ್ಷಕರ ನೇಮಕ ಮಾಡಲಾಗಿದೆ.ಧಾರವಾಡ ಜಿಲ್ಲೆಯ ನಾಯಕರಿಗೂ ಜವಾಬ್ದಾರಿ ವಹಿಸಲಾಗಿದೆ. ಸಿದ್ಧತೆ ಕುರಿತು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ, ಅವರೊಂದಿಗೆ ಚರ್ಚೆ ನಡೆಸುತ್ತಿದ್ದೇನೆ’ ಎಂದು ತಿಳಿಸಿದರು.</p>.<p>‘ಇಲ್ಲಿವರೆಗೆ ಕಾಂಗ್ರೆಸ್ ಮಾಸ್ ಪಕ್ಷವಾಗಿತ್ತು. ಇನ್ನು ಮುಂದೆ ಕೇಡರ್ ಬೇಸ್ ಪಕ್ಷವಾಗಿ ಹೊರಹೊಮ್ಮಲಿದೆ. ಪಕ್ಷದ ಕಾರ್ಯಕರ್ತರಿಗೆ ಸೂಕ್ತ ರೀತಿಯಲ್ಲಿ ತರಬೇತಿ ನೀಡುವ ಯೋಜನೆ ಇದೆ. ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆ ಬಗ್ಗೆ ಗಂಭೀರ ಚಿಂತನೆ ಮಾಡಲಾಗುತ್ತಿದೆ ಎಂದರು.</p>.<p>‘ಕೋವಿಡ್ –19 ವೇಳೆ ಪಕ್ಷ ಜನರ ಸಂಕಷ್ಟಗಳಿಗೆ ಸ್ಪಂದಿಸಿದೆ. ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು’ ಎಂದು ಹೇಳಿದರು.</p>.<p>ಶಾಸಕಿ ಕುಸುಮಾವತಿ ಶಿವಳ್ಳಿ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮುಖಂಡರಾದ ಅನಿಲಕುಮಾರ ಪಾಟೀಲ, ಅಲ್ತಾಫ ಹಳ್ಳೂರ, ನಾಗರಾಜ ಛಬ್ಬಿ, ವೀರಣ್ಣ ಮತ್ತಿಕಟ್ಟಿ,</p>.<p><strong>ಅಂತರ ಮರೆತ ನಾಯಕರು: </strong>ಕಾಂಗ್ರೆಸ್ ಸಭೆಯಲ್ಲಿ ನಾಯಕರು ಹಾಗೂ ಕಾರ್ಯಕರ್ತರು ಅಂತರ ಮರೆತಿದ್ದರು.</p>.<p>ಸತೀಶ ಜಾರಕಿಹೊಳಿ ಸೇರಿದಂತೆ ವೇದಿಕೆಯಲ್ಲಿದ್ದ ಬಹುತೇಕ ನಾಯಕರು ಒಬ್ಬರಿಗೊಬ್ಬರು ಒತ್ತಿಕೊಂಡೇ ಕುಳಿತಿದ್ದರು. ಪಕ್ಷದ ಕಾರ್ಯಕರ್ತರೂ ಕೂಡ ನಾಯಕರನ್ನೇ ಅನುಸರಿಸಿದರು. ನೂರಕ್ಕೂ ಹೆಚ್ಚು ಜನರು ಸೇರಿದ್ದರು. ಕೆಲವರು ಮಾಸ್ಕ್ ಸಹ ಧರಿಸಿರಿಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: ‘</strong>ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಜೂನ್ 7 ರಂದು ಅಧಿಕಾರ ವಹಿಸಿಕೊಳ್ಳಲಿದ್ದು, ಕಾರ್ಯಕ್ರಮ ವೀಕ್ಷಣೆಗೆ ರಾಜ್ಯದ 8 ಸಾವಿರ ಕಡೆಗಳಲ್ಲಿ ಎಲ್ಇಡಿ ಸ್ಕ್ರೀನ್ ಅಳವಡಿಸಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.</p>.<p>ಗುರುವಾರ ಪಕ್ಷದ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಮಾರಂಭ ಸರಳವಾಗಿ ನಡೆಯಲಿದೆ. ಪಕ್ಷದ ಕಾರ್ಯಕರ್ತರಿಗೆ ವೀಕ್ಷಣೆಗಾಗಿ ವ್ಯವಸ್ಥೆ ಮಾಡಲಿದ್ದು, 4 ಲಕ್ಷ ಜನ ವೀಕ್ಷಿಸಲಿದ್ದಾರೆ’ ಎಂದರು.</p>.<p>‘ರಾಜ್ಯದಾದ್ಯಂತ ಎಲ್ಲ ಗ್ರಾಮ ಪಂಚಾಯ್ತಿಯಿಂದ ಹಿಡಿದು ಜಿಲ್ಲಾ ಮಟ್ಟದವರೆಗೆ ವೀಕ್ಷಣೆಗೆ ಅವಕಾಶ ಮಾಡಲಾಗುವುದು. ವ್ಯವಸ್ಥೆ ಮಾಡುವಂತೆ ಎಲ್ಲ ಕ್ಷೇತ್ರಗಳ ನಾಯಕರಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.</p>.<p>‘ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮೇಲ್ವಿಚಾರಣೆಗೆ ವೀಕ್ಷಕರ ನೇಮಕ ಮಾಡಲಾಗಿದೆ.ಧಾರವಾಡ ಜಿಲ್ಲೆಯ ನಾಯಕರಿಗೂ ಜವಾಬ್ದಾರಿ ವಹಿಸಲಾಗಿದೆ. ಸಿದ್ಧತೆ ಕುರಿತು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ, ಅವರೊಂದಿಗೆ ಚರ್ಚೆ ನಡೆಸುತ್ತಿದ್ದೇನೆ’ ಎಂದು ತಿಳಿಸಿದರು.</p>.<p>‘ಇಲ್ಲಿವರೆಗೆ ಕಾಂಗ್ರೆಸ್ ಮಾಸ್ ಪಕ್ಷವಾಗಿತ್ತು. ಇನ್ನು ಮುಂದೆ ಕೇಡರ್ ಬೇಸ್ ಪಕ್ಷವಾಗಿ ಹೊರಹೊಮ್ಮಲಿದೆ. ಪಕ್ಷದ ಕಾರ್ಯಕರ್ತರಿಗೆ ಸೂಕ್ತ ರೀತಿಯಲ್ಲಿ ತರಬೇತಿ ನೀಡುವ ಯೋಜನೆ ಇದೆ. ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆ ಬಗ್ಗೆ ಗಂಭೀರ ಚಿಂತನೆ ಮಾಡಲಾಗುತ್ತಿದೆ ಎಂದರು.</p>.<p>‘ಕೋವಿಡ್ –19 ವೇಳೆ ಪಕ್ಷ ಜನರ ಸಂಕಷ್ಟಗಳಿಗೆ ಸ್ಪಂದಿಸಿದೆ. ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು’ ಎಂದು ಹೇಳಿದರು.</p>.<p>ಶಾಸಕಿ ಕುಸುಮಾವತಿ ಶಿವಳ್ಳಿ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮುಖಂಡರಾದ ಅನಿಲಕುಮಾರ ಪಾಟೀಲ, ಅಲ್ತಾಫ ಹಳ್ಳೂರ, ನಾಗರಾಜ ಛಬ್ಬಿ, ವೀರಣ್ಣ ಮತ್ತಿಕಟ್ಟಿ,</p>.<p><strong>ಅಂತರ ಮರೆತ ನಾಯಕರು: </strong>ಕಾಂಗ್ರೆಸ್ ಸಭೆಯಲ್ಲಿ ನಾಯಕರು ಹಾಗೂ ಕಾರ್ಯಕರ್ತರು ಅಂತರ ಮರೆತಿದ್ದರು.</p>.<p>ಸತೀಶ ಜಾರಕಿಹೊಳಿ ಸೇರಿದಂತೆ ವೇದಿಕೆಯಲ್ಲಿದ್ದ ಬಹುತೇಕ ನಾಯಕರು ಒಬ್ಬರಿಗೊಬ್ಬರು ಒತ್ತಿಕೊಂಡೇ ಕುಳಿತಿದ್ದರು. ಪಕ್ಷದ ಕಾರ್ಯಕರ್ತರೂ ಕೂಡ ನಾಯಕರನ್ನೇ ಅನುಸರಿಸಿದರು. ನೂರಕ್ಕೂ ಹೆಚ್ಚು ಜನರು ಸೇರಿದ್ದರು. ಕೆಲವರು ಮಾಸ್ಕ್ ಸಹ ಧರಿಸಿರಿಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>