ಬೆಳಗಾವಿ, ಹುಬ್ಬಳ್ಳಿ- ಧಾರವಾಡ, ಬಳ್ಳಾರಿ ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳ ಮರು ವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಆ. 8ರಂದು ಅಧಿಸೂಚನೆ ಹೊರಡಿಸಿತ್ತು. ಗದಗ- ಬೆಟಗೇರಿ ನಗರಸಭೆಗೆ ಜುಲೈ 30 ರಂದು ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಬೆಳಗಾವಿಯ ಬೈರಗೌಡ ಪಾಟೀಲ, ಧಾರವಾಡದ ಸಂಜಯ ಕಪಟಕರ, ಬಳ್ಳಾರಿ ಹಾಗೂ ಗದಗ- ಬೆಟಗೇರಿ ನಗರಸಭೆ ಕೆಲ ಸದಸ್ಯರು, ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.