ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನಗರದ ಶಿವಾಜಿ ವೃತ್ತದಲ್ಲಿ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಾಮಪತ್ರ ಸಲ್ಲಿಸಲು ತೆರಳಿದರು.
ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಮಾಜಿ ಸಚಿವ ಸಿ.ಟಿ.ರವಿ, ಬೈರತಿ ಬಸವರಾಜ ಮೊದಲಾದವರು ಜೊತೆಗಿದ್ದರು.
ಮೋದಿ, ಬಿ.ಎಸ್.ಯಡಿಯೂರಪ್ಪ, ಪ್ರಲ್ಹಾದ ಜೋಶಿ, ಕಮಲ ಭಿತ್ತಿಚಿತ್ರಗಳನ್ನು ಕೈಯಲ್ಲಿ ಹಿಡಿದು ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿದರು.