‘ವಿದ್ಯುತ್ ನಿಗಮಗಳಿಗೆ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಆಗುತ್ತಿಲ್ಲ. ಕೇಂದ್ರದಿಂದ ಗುಣಮಟ್ಟದ ಕಲ್ಲಿದ್ದಲು ಸಿಗುತ್ತಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ, ಭರವಸೆ ನೀಡಿದ್ದಕ್ಕಿಂತ ಹೆಚ್ಚು ಪೂರೈಕೆ ಮಾಡಲಾಗುತ್ತಿದ್ದು, ಕಳೆದ ಏಳು ದಿನಗಳಲ್ಲಿ ಪ್ರತಿ ದಿನ 39 ಸಾವಿರ ಟನ್ ಪೂರೈಕೆ ಮಾಡಲಾಗಿದೆ. ರಾಜ್ಯ ಸರ್ಕಾರ ಕಲ್ಲಿದ್ದಲು ಸಚಿವಾಲಯಕ್ಕೆ ₹683 ಕೋಟಿ ಬಾಕಿ ಉಳಿಸಿಕೊಂಡಿದೆ. ನಾವು ಒಪ್ಪಂದದ ಪ್ರಕಾರ 2,698 ಲಕ್ಷ ಟನ್ ಪೂರೈಸಬೇಕು. ಆದರೆ, 3,153 ಲಕ್ಷ ಟನ್ ಪೂರೈಕೆ ಮಾಡುತ್ತಿದ್ದೇವೆ’ ಎಂದರು.