<p><strong>ಹುಬ್ಬಳ್ಳಿ:</strong> 'ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ಬಿಜೆಪಿ ಹಾಗೂ ಮಿತ್ರಪಕ್ಷಗಳನ್ನು ದೇಶದ ಕಾರ್ಮಿಕ ವರ್ಗವು ಒಗ್ಗಟ್ಟಾಗಿ ಸೋಲಿಸುವ ಮೂಲಕ ಪ್ರಜಾಪ್ರಭುತ್ವ ಹಾಗೂ ಧರ್ಮ ನಿರಪೇಕ್ಷ ಪಕ್ಷಗಳನ್ನು ಗೆಲ್ಲಿಸಬೇಕು' ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ. ಮಹಾಂತೇಶ ಮನವಿ ಮಾಡಿದರು.</p><p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದುಡಿಯುವ ವರ್ಗಕ್ಕೆ ಬೆಲೆ ಇಲ್ಲದಂತಾಗಿದೆ. ಬಿಜೆಪಿ ಶ್ರೀಮಂತರ ಪರವಾಗಿ ನಿಂತು, ಬಡವರು ಮತ್ತು ದುಡಿಯುವ ವರ್ಗದ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ದೇಶದ ಕಾರ್ಮಿಕ ವರ್ಗ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ ಚಲಾಯಿಸಬೇಕು' ಎಂದರು.</p><p>'ಬಿಜೆಪಿ ಸರ್ಕಾರ ಕಾರ್ಮಿಕ ವರ್ಗಕ್ಕೆ ಹಾಗೂ ದೇಶದ ಮತದಾರರಿಗೆ ಮಾಡಿರುವ ಅನ್ಯಾಯದ ಕುರಿತು ಜಾಗೃತಿ ಮೂಡಿಸಲು, ಗುರುವಾರ(ಎಪ್ರಿಲ್ 25) ದಿಂದ ಮೇ 5 ರ ವರೆಗೆ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಸಭೆಗಳನ್ನು ನಡೆಸಲಿದೆ' ಎಂದು ಹೇಳೀದರು.</p><p>ಇದೇ ವೇಳೆ ಸಿಐಟಿಯುನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು. ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ, ಜಿಲ್ಲಾ ಘಟಕದ ಅಧ್ಯಕ್ಷ ಬಿ.ಐ. ಈಳಗೇರ, ಸುನಂದಾ ಚಿಗರಿ, ಬಸವಣ್ಣಪ್ಪ ನೇಗಲಿ, ಬಿ.ಎನ್. ಪೂಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> 'ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ಬಿಜೆಪಿ ಹಾಗೂ ಮಿತ್ರಪಕ್ಷಗಳನ್ನು ದೇಶದ ಕಾರ್ಮಿಕ ವರ್ಗವು ಒಗ್ಗಟ್ಟಾಗಿ ಸೋಲಿಸುವ ಮೂಲಕ ಪ್ರಜಾಪ್ರಭುತ್ವ ಹಾಗೂ ಧರ್ಮ ನಿರಪೇಕ್ಷ ಪಕ್ಷಗಳನ್ನು ಗೆಲ್ಲಿಸಬೇಕು' ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ. ಮಹಾಂತೇಶ ಮನವಿ ಮಾಡಿದರು.</p><p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದುಡಿಯುವ ವರ್ಗಕ್ಕೆ ಬೆಲೆ ಇಲ್ಲದಂತಾಗಿದೆ. ಬಿಜೆಪಿ ಶ್ರೀಮಂತರ ಪರವಾಗಿ ನಿಂತು, ಬಡವರು ಮತ್ತು ದುಡಿಯುವ ವರ್ಗದ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ದೇಶದ ಕಾರ್ಮಿಕ ವರ್ಗ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ ಚಲಾಯಿಸಬೇಕು' ಎಂದರು.</p><p>'ಬಿಜೆಪಿ ಸರ್ಕಾರ ಕಾರ್ಮಿಕ ವರ್ಗಕ್ಕೆ ಹಾಗೂ ದೇಶದ ಮತದಾರರಿಗೆ ಮಾಡಿರುವ ಅನ್ಯಾಯದ ಕುರಿತು ಜಾಗೃತಿ ಮೂಡಿಸಲು, ಗುರುವಾರ(ಎಪ್ರಿಲ್ 25) ದಿಂದ ಮೇ 5 ರ ವರೆಗೆ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಸಭೆಗಳನ್ನು ನಡೆಸಲಿದೆ' ಎಂದು ಹೇಳೀದರು.</p><p>ಇದೇ ವೇಳೆ ಸಿಐಟಿಯುನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು. ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ, ಜಿಲ್ಲಾ ಘಟಕದ ಅಧ್ಯಕ್ಷ ಬಿ.ಐ. ಈಳಗೇರ, ಸುನಂದಾ ಚಿಗರಿ, ಬಸವಣ್ಣಪ್ಪ ನೇಗಲಿ, ಬಿ.ಎನ್. ಪೂಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>