ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಟಿಕೆಟ್ ಹಂಚಿಕೆ ರಾಷ್ಟ್ರೀಯ ನಾಯಕರ ತೀರ್ಮಾನ: ಪ್ರಲ್ಹಾದ ಜೋಶಿ

Published 8 ಮಾರ್ಚ್ 2024, 8:34 IST
Last Updated 8 ಮಾರ್ಚ್ 2024, 8:34 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರಿಗೆ ಟಿಕೆಟ್ ನೀಡಬೇಕು ಎನ್ನುವುದನ್ನು ರಾಷ್ಟ್ರೀಯ ನಾಯಕರು ತೀರ್ಮಾನಿಸುತ್ತಾರೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

'ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ‌ ಮೂವರು ಅಭ್ಯರ್ಥಿಗಳ ಹೆಸರು ಪ್ರಸ್ತಾವವಾಗಿದೆ' ಎನ್ನುವ ಮಾಧ್ಯಮದವರ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, 'ಯಾರಿಗೆ ಟಿಕೆಟ್ ನೀಡಬೇಕು, ಯಾರಿಗೆ ನೀಡಬಾರದು ಎನ್ನುವುದು ರಾಷ್ಟ್ರೀಯ ನಾಯಕರು ತೀರ್ಮಾನಿಸುತ್ತಾರೆ. ಟಿಕೆಟ್ ನೀಡುವ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಊಹಾಪೋಹಕ್ಕೆ ಉತ್ತರ ನೀಡುವುದಿಲ್ಲ. ಈ ಹಿಂದೆ 8 ಬಾರಿ ಗೆದ್ದವರಿಗೂ ಟಿಕೆಟ್ ನೀಡಲಾಗಿದೆ. ಗೆಲ್ಲುವ ಸಾಧ್ಯತೆ ಇದ್ದವರಿಗೂ ನೀಡಲಾಗಿದೆ. ಅಭ್ಯರ್ಥಿಗಳ ಪಟ್ಟಿ ಶೀಘ್ರ ಬಿಡುಗಡೆಯಾಗಲಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT