<p><strong>ಹುಬ್ಬಳ್ಳಿ:</strong> ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿ, ಹಿಂದೂ ಜನಜಾಗೃತಿ ಸಮಿತಿಯ ರಣರಾಗಿಣಿ ಶಾಖೆಯ ಸದಸ್ಯರು ಒತ್ತಾಯಿಸಿದ್ದಾರೆ.</p>.<p>ನಗರದ ಮಿನಿ ವಿಧಾನಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ಸದಸ್ಯರು, ‘ರಾಜ್ಯದಲ್ಲಿಯೂ ಲವ್ ಜಿಹಾದ್ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿವೆ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<p>‘ಮುಸ್ಲಿಂ ವ್ಯಕ್ತಿಯೊಬ್ಬ ಮುಂಬೈ ಮೂಲದ ಹಿಂದೂ ಯುವತಿಯನ್ನು ಕತ್ತರಿಸಿ, ಬರ್ಬರವಾಗಿ ಹತ್ಯೆಗೈದಿದ್ದಾನೆ. ಈ ಘಟನೆ ಹಿಂದೆ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ರಾಯಚೂರಿನಲ್ಲಿ ಹಿಂದೂ ಯುವತಿಯು ಲವ್ ಜಿಹಾದ್ ಬಲೆಗೆ ಸಿಲುಕಿರುವುದು ಪತ್ತೆಯಾಗಿದೆ. ಉತ್ತರಪ್ರದೇಶ ಲಖನೌದಲ್ಲಿಯೂ ಇಂತಹದ್ದೇ ಪ್ರಕರಣಗಳು ನಡೆಯುತ್ತಿವೆ. ಇಂತಹ ಘಟನೆಗಳ ತಡೆಗೆ ಕಠಿಣವಾದ ಕಾಯ್ದೆ ಜಾರಿಗೆ ತರಬೇಕು’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.</p>.<p>ಶಾಖೆಯ ಸಂಯೋಜಕಿ ಕವಿತಾ, ರೂಪಾ ದವಳಗಿ, ವಿದುಲಾ ಹಳದಿಪುರ, ಗೀತಾಂಜಲಿ, ಸುಧಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿ, ಹಿಂದೂ ಜನಜಾಗೃತಿ ಸಮಿತಿಯ ರಣರಾಗಿಣಿ ಶಾಖೆಯ ಸದಸ್ಯರು ಒತ್ತಾಯಿಸಿದ್ದಾರೆ.</p>.<p>ನಗರದ ಮಿನಿ ವಿಧಾನಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ಸದಸ್ಯರು, ‘ರಾಜ್ಯದಲ್ಲಿಯೂ ಲವ್ ಜಿಹಾದ್ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿವೆ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<p>‘ಮುಸ್ಲಿಂ ವ್ಯಕ್ತಿಯೊಬ್ಬ ಮುಂಬೈ ಮೂಲದ ಹಿಂದೂ ಯುವತಿಯನ್ನು ಕತ್ತರಿಸಿ, ಬರ್ಬರವಾಗಿ ಹತ್ಯೆಗೈದಿದ್ದಾನೆ. ಈ ಘಟನೆ ಹಿಂದೆ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ರಾಯಚೂರಿನಲ್ಲಿ ಹಿಂದೂ ಯುವತಿಯು ಲವ್ ಜಿಹಾದ್ ಬಲೆಗೆ ಸಿಲುಕಿರುವುದು ಪತ್ತೆಯಾಗಿದೆ. ಉತ್ತರಪ್ರದೇಶ ಲಖನೌದಲ್ಲಿಯೂ ಇಂತಹದ್ದೇ ಪ್ರಕರಣಗಳು ನಡೆಯುತ್ತಿವೆ. ಇಂತಹ ಘಟನೆಗಳ ತಡೆಗೆ ಕಠಿಣವಾದ ಕಾಯ್ದೆ ಜಾರಿಗೆ ತರಬೇಕು’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.</p>.<p>ಶಾಖೆಯ ಸಂಯೋಜಕಿ ಕವಿತಾ, ರೂಪಾ ದವಳಗಿ, ವಿದುಲಾ ಹಳದಿಪುರ, ಗೀತಾಂಜಲಿ, ಸುಧಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>