<p><strong>ಹುಬ್ಬಳ್ಳಿ: </strong>ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ವಿರೋಧಿಸಿ, ನಗರದ ಚನ್ನಮ್ಮ ವೃತ್ತದಲ್ಲಿ ಯುವತಿಯೊಬ್ಬರು ಸೋಮವಾರ ಏಕಾಂಗಿಯಾಗಿ ಪ್ರತಿಭಟಿಸುವ ಮೂಲಕ ಗಮನ ಸೆಳೆದರು.</p>.<p>ಬಿವಿಬಿ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಎಂ.ಟೆಕ್ ಮುಗಿಸಿರುವ ಹುಬ್ಬಳ್ಳಿಯ ಕೀರ್ತಿ ಚೆನ್ನರೆಡ್ಡಿ ಪ್ರತಿಭಟನೆ ನಡೆಸಿದವರು. ಚನ್ನಮ್ಮನ ಪ್ರತಿಮೆ ಕೆಳಗೆ ಕೆಲ ಹೊತ್ತು ಕುಳಿತು ಪ್ರತಿಭಟಿಸಿದ ಕೀರ್ತಿ, ರೈಲು ಮಾರ್ಗದಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಪಟ್ಟಿಯನ್ನೊಳಗೊಂಡ ಕಪ್ಪು ಬೋರ್ಡ್ ಪ್ರದರ್ಶಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉದ್ದೇಶಿತ 163 ಕಿಲೋಮಿಟರ್ ಉದ್ದದ ರೈಲು ಯೋಜನೆಗಾಗಿ ಎರಡೂವರೆ ಲಕ್ಷಕ್ಕೂ ಅಧಿಕ ಮರಗಳನ್ನು ಕತ್ತರಿಸಬೇಕಾಗುತ್ತದೆ. ಇದರಿಂದ ಪ್ರಕೃತಿ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ’ ಎಂದರು.</p>.<p>‘ನಗರ ಪ್ರದೇಶಗಳ ಸುತ್ತಮುತ್ತ ಇದ್ದ ಅರಣ್ಯವನ್ನು ಅಭಿವೃದ್ಧಿ ಹೆಸರಿನಲ್ಲಿ ಈಗಾಗಲೇ ನಾಶ ಮಾಡಲಾಗಿದೆ. ರೈಲು ಯೋಜನೆಗಾಗಿ, ಈಗ ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟಕ್ಕೆ ಹಾನಿ ಮಾಡುವುದು ಬೇಡ. ಇಂತಹ ಯೋಜನೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ವಿರೋಧಿಸಿ, ನಗರದ ಚನ್ನಮ್ಮ ವೃತ್ತದಲ್ಲಿ ಯುವತಿಯೊಬ್ಬರು ಸೋಮವಾರ ಏಕಾಂಗಿಯಾಗಿ ಪ್ರತಿಭಟಿಸುವ ಮೂಲಕ ಗಮನ ಸೆಳೆದರು.</p>.<p>ಬಿವಿಬಿ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಎಂ.ಟೆಕ್ ಮುಗಿಸಿರುವ ಹುಬ್ಬಳ್ಳಿಯ ಕೀರ್ತಿ ಚೆನ್ನರೆಡ್ಡಿ ಪ್ರತಿಭಟನೆ ನಡೆಸಿದವರು. ಚನ್ನಮ್ಮನ ಪ್ರತಿಮೆ ಕೆಳಗೆ ಕೆಲ ಹೊತ್ತು ಕುಳಿತು ಪ್ರತಿಭಟಿಸಿದ ಕೀರ್ತಿ, ರೈಲು ಮಾರ್ಗದಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಪಟ್ಟಿಯನ್ನೊಳಗೊಂಡ ಕಪ್ಪು ಬೋರ್ಡ್ ಪ್ರದರ್ಶಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉದ್ದೇಶಿತ 163 ಕಿಲೋಮಿಟರ್ ಉದ್ದದ ರೈಲು ಯೋಜನೆಗಾಗಿ ಎರಡೂವರೆ ಲಕ್ಷಕ್ಕೂ ಅಧಿಕ ಮರಗಳನ್ನು ಕತ್ತರಿಸಬೇಕಾಗುತ್ತದೆ. ಇದರಿಂದ ಪ್ರಕೃತಿ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ’ ಎಂದರು.</p>.<p>‘ನಗರ ಪ್ರದೇಶಗಳ ಸುತ್ತಮುತ್ತ ಇದ್ದ ಅರಣ್ಯವನ್ನು ಅಭಿವೃದ್ಧಿ ಹೆಸರಿನಲ್ಲಿ ಈಗಾಗಲೇ ನಾಶ ಮಾಡಲಾಗಿದೆ. ರೈಲು ಯೋಜನೆಗಾಗಿ, ಈಗ ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟಕ್ಕೆ ಹಾನಿ ಮಾಡುವುದು ಬೇಡ. ಇಂತಹ ಯೋಜನೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>