<p>ಹುಬ್ಬಳ್ಳಿ: ‘ಕಳಸಾ ಬಂಡೂರಿ, ಮಹದಾಯಿ ಯೋಜನೆ ವಿಷಯ ಸುಪ್ರೀಂ ಕೋರ್ಟ್ನಲ್ಲಿದೆ. ಅಲ್ಲಿ ಪರಿಹಾರ ಸಿಗದೇ ಮುಂದುವರಿಯಲಾಗದು. ಪ್ರಕರಣವನ್ನು ಬೇಗ ಇತ್ಯರ್ಥಪಡಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಒತ್ತಾಯಿಸಿದರು. </p>.<p>‘ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲ ವಿಷಯ ಗೊತ್ತಿದ್ದರೂ ಹುಬ್ಬಳ್ಳಿಯ ಶಿರಗುಪ್ಪಿಯಲ್ಲಿ ಸುಳ್ಳು ಹೇಳಿ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದು ಅವರಿಗೆ ಶೋಭೆ ತರುವುದಿಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕಾನೂನು ಸಚಿವ ಎಚ್.ಕೆ.ಪಾಟೀಲರು ಹಿಂದೆ ‘ಕೃಷ್ಣೆಯ ಕಣ್ಣೀರ ಕಥೆ ವ್ಯಥೆ’ ಪುಸ್ತಕ ಬರೆದಿದ್ದರು. ಈಗ ಮೌನ ವಹಿಸಿದ್ದಾರೆ. ಅವರು ಯುಕೆಪಿ ಯೋಜನೆಗೆ ₹20 ಸಾವಿರ ಕೋಟಿ ಕೊಡಿಸಬೇಕು’ ಎಂದು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಕಳಸಾ ಬಂಡೂರಿ, ಮಹದಾಯಿ ಯೋಜನೆ ವಿಷಯ ಸುಪ್ರೀಂ ಕೋರ್ಟ್ನಲ್ಲಿದೆ. ಅಲ್ಲಿ ಪರಿಹಾರ ಸಿಗದೇ ಮುಂದುವರಿಯಲಾಗದು. ಪ್ರಕರಣವನ್ನು ಬೇಗ ಇತ್ಯರ್ಥಪಡಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಒತ್ತಾಯಿಸಿದರು. </p>.<p>‘ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲ ವಿಷಯ ಗೊತ್ತಿದ್ದರೂ ಹುಬ್ಬಳ್ಳಿಯ ಶಿರಗುಪ್ಪಿಯಲ್ಲಿ ಸುಳ್ಳು ಹೇಳಿ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದು ಅವರಿಗೆ ಶೋಭೆ ತರುವುದಿಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕಾನೂನು ಸಚಿವ ಎಚ್.ಕೆ.ಪಾಟೀಲರು ಹಿಂದೆ ‘ಕೃಷ್ಣೆಯ ಕಣ್ಣೀರ ಕಥೆ ವ್ಯಥೆ’ ಪುಸ್ತಕ ಬರೆದಿದ್ದರು. ಈಗ ಮೌನ ವಹಿಸಿದ್ದಾರೆ. ಅವರು ಯುಕೆಪಿ ಯೋಜನೆಗೆ ₹20 ಸಾವಿರ ಕೋಟಿ ಕೊಡಿಸಬೇಕು’ ಎಂದು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>