<p><strong>ನವಲಗುಂದ</strong>: ಮಹದಾಯಿ ನದಿಯ ಕಳಸಾ ಬಂಡೂರಿ ಯೋಜನೆ ಜಾರಿಗೆ ಸಂಬಂಧ ರಾಜ್ಯದ ಪ್ರಸ್ತಾವವನ್ನು ಕೇಂದ್ರ ಉನ್ನತಾಧಿಕಾರಿಗಳ ಸಮಿತಿ ತಿರಸ್ಕರಿಸಿದೆ ಎಂಬ ಮಾಹಿತಿ ಇದೆ. ಈ ನಿರ್ಧಾರವನ್ನು ರೈತರು ಮತ್ತು ವ್ಯಾಪ್ತಿಯ ನಾಗರಿಕರ ಪರವಾಗಿ ಉಗ್ರವಾಗಿ ಖಂಡಿಸುತ್ತೇವೆ ಎಂದು ಕರ್ನಾಟಕ ರೈತ ಸೇನೆ ರಾಜ್ಯಾಧ್ಯಕ್ಷ ಶಂಕರ ಅಂಬಲಿ ತಿಳಿಸಿದ್ದಾರೆ.</p>.<p>‘ಒಂದು ಕುಡಿಯುವ ನೀರಿನ ವ್ಯಾಜ್ಯವನ್ನು ಎರಡು ದೇಶಗಳ ವ್ಯಾಜ್ಯದ ರೀತಿಯಲ್ಲಿ 50 ವರ್ಷಗಳಿಂದಲೂ ಜೀವಂತವಾಗಿ ಇಡಲಾಗಿದೆ’ ಎಂದು ಟೀಕಿಸಿದರು. ಕೂಡಲೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ ನೀಡಬೇಕು. ತಮ್ಮಿಂದ ಸಾಧ್ಯವಿಲ್ಲ ಎಂಬುದನ್ನಾದರೂ ಹೇಳಿ ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯ ಸರ್ಕಾರ ಪ್ರಸ್ತಾವ ಕಳಿಸಿ ಕೈತೊಳೆದುಕೊಂಡರೆ ಸಾಲದು. ಈ ಯೋಜನೆ ಜಾರಿಗೆ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಳಂಬ ಧೋರಣೆ ಮಾಡಬಾರದು ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-24-602464922</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ</strong>: ಮಹದಾಯಿ ನದಿಯ ಕಳಸಾ ಬಂಡೂರಿ ಯೋಜನೆ ಜಾರಿಗೆ ಸಂಬಂಧ ರಾಜ್ಯದ ಪ್ರಸ್ತಾವವನ್ನು ಕೇಂದ್ರ ಉನ್ನತಾಧಿಕಾರಿಗಳ ಸಮಿತಿ ತಿರಸ್ಕರಿಸಿದೆ ಎಂಬ ಮಾಹಿತಿ ಇದೆ. ಈ ನಿರ್ಧಾರವನ್ನು ರೈತರು ಮತ್ತು ವ್ಯಾಪ್ತಿಯ ನಾಗರಿಕರ ಪರವಾಗಿ ಉಗ್ರವಾಗಿ ಖಂಡಿಸುತ್ತೇವೆ ಎಂದು ಕರ್ನಾಟಕ ರೈತ ಸೇನೆ ರಾಜ್ಯಾಧ್ಯಕ್ಷ ಶಂಕರ ಅಂಬಲಿ ತಿಳಿಸಿದ್ದಾರೆ.</p>.<p>‘ಒಂದು ಕುಡಿಯುವ ನೀರಿನ ವ್ಯಾಜ್ಯವನ್ನು ಎರಡು ದೇಶಗಳ ವ್ಯಾಜ್ಯದ ರೀತಿಯಲ್ಲಿ 50 ವರ್ಷಗಳಿಂದಲೂ ಜೀವಂತವಾಗಿ ಇಡಲಾಗಿದೆ’ ಎಂದು ಟೀಕಿಸಿದರು. ಕೂಡಲೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ ನೀಡಬೇಕು. ತಮ್ಮಿಂದ ಸಾಧ್ಯವಿಲ್ಲ ಎಂಬುದನ್ನಾದರೂ ಹೇಳಿ ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯ ಸರ್ಕಾರ ಪ್ರಸ್ತಾವ ಕಳಿಸಿ ಕೈತೊಳೆದುಕೊಂಡರೆ ಸಾಲದು. ಈ ಯೋಜನೆ ಜಾರಿಗೆ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಳಂಬ ಧೋರಣೆ ಮಾಡಬಾರದು ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-24-602464922</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>