<p><strong>ಹುಬ್ಬಳ್ಳಿ:</strong> ನಗರದ ಕೇಶ್ವಾಪುರದಲ್ಲಿರುವ ಐಸಿಎಐ ಭವನದಲ್ಲಿ ಭಾನುವಾರ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ ಅಮೃತ ಮಹೋತ್ಸವ ಮತ್ತು ‘ವಿಕಸಿತ ಭಾರತಕ್ಕಾಗಿ ಓಟ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ‘2047ಕ್ಕೆ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ನೂರು ವರ್ಷಗಳಾಗುತ್ತವೆ. ಆ ಸಂದರ್ಭದಲ್ಲಿ ಜಗತ್ತಿನಲ್ಲಿ ಉನ್ನತ ಸ್ಥಾನಕ್ಕೆ ಭಾರತವನ್ನು ತಲುಪಿಸುವ ಗುರಿಯೊಂದಿಗೆ ವಿಕಸಿತ ಭಾರತ ಪರಿಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ. ಅದನ್ನು ಸಾಕಾರಗೊಳಿಸಲು ಎಲ್ಲರೂ ಶ್ರಮಿಸಬೇಕು’ ಎಂದರು.</p>.<p>‘ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು ರಾಷ್ಟ್ರಮಟ್ಟದಲ್ಲಿ ಕೇಂದ್ರ ಸರ್ಕಾರದೊಂದಿಗೆ ಕೈಜೋಡಿಸಿ ದೇಶವನ್ನು ಪ್ರಬಲ ಆರ್ಥಿಕ ಶಕ್ತಿಯನ್ನಾಗಿ ಮುನ್ನಡೆಸಲು ಲೆಕ್ಕಪರಿಶೋಧಕರ ಪ್ರಾದೇಶಿಕ ಮಂಡಳಿಗಳು ಹಾಗೂ ಶಾಖೆಗಳಲ್ಲಿ ವಿಕಸಿತ ಭಾರತದ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ’ ಎಂದು ಹೇಳಿದರು.</p>.<p>‘ಕಳೆದ ಹತ್ತು ವರ್ಷಗಳಲ್ಲಿ ರಸ್ತೆ ಅಭಿವೃದ್ಧಿ, ಉಜ್ವಲ ಯೋಜನೆ, ವಿಮಾನ ನಿಲ್ದಾಣಗಳ ಉನ್ನತೀಕರಣ, ಸರಕು ಸಾಗಾಣಿಕೆ ಅಭಿವೃದ್ಧಿ, ರೈಲ್ವೆ ಸಂಪರ್ಕ ಅಭಿವೃದ್ಧಿ ಸೇರಿದಂತೆ ಕೇಂದ್ರ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ’ ಎಂದರು.</p>.<p>ಮಹಾನಗರ ಪಾಲಿಕೆ ಸದಸ್ಯೆ ಉಮಾ ಮುಕುಂದ ಮಾತನಾಡಿ, ‘ಸ್ತ್ರೀ ಸಬಲೀಕರಣದ ಅಂಗವಾಗಿ ಕೇಂದ್ರ ಸರ್ಕಾರ ಮಹಿಳೆಯರಿಗೆ ಶೇ 33.33 ರಷ್ಟು ಮೀಸಲಾತಿ ನೀಡಿದೆ. ‘ಸಿಎ’ ಓದುತ್ತಿರುವ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉನ್ನತ ಹುದ್ದೆ ಅಲಂಕರಿಸಬೇಕು’ ಎಂದು ಹೇಳಿದರು.</p>.<p>ಸಂಸ್ಥೆಯ ಹುಬ್ಬಳ್ಳಿ ಶಾಖೆಯ ಅಧ್ಯಕ್ಷ ಧನಪಾಲ್ ಜೆ.ಮುನ್ನೊಳ್ಳಿ ಸ್ವಾಗತಿಸಿದರು. ಚಂದ್ರಶೇಖರ್ ಧವಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ರಿಷಬ್ ಉಪಾಧ್ಯಾಯ ವಂದಿಸಿದರು.</p>.<p>ವಿಕಸಿತ ಭಾರತ ಧ್ಯೇಯವಾಕ್ಯದ ಅಡಿ ಸಂಸ್ಥೆಯ ಎಲ್ಲ ಸದಸ್ಯರು ಹಾಗೂ ವಿದ್ಯಾರ್ಥಿಗಳ ಓಟದಲ್ಲಿ ಪಾಲ್ಗೊಂಡಿದ್ದರು. ಕೇಶ್ವಾಪುರದ ಐಸಿಎಐ ಭವನದಿಂದ ಪ್ರಾರಂಭವಾದ ಓಟ ಬಸವೇಶ್ವರ ವೃತ್ತದ ಮೂಲಕ ಪುನಃ ಐಸಿಎಐ ಭವನ ತಲುಪಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ನಗರದ ಕೇಶ್ವಾಪುರದಲ್ಲಿರುವ ಐಸಿಎಐ ಭವನದಲ್ಲಿ ಭಾನುವಾರ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ ಅಮೃತ ಮಹೋತ್ಸವ ಮತ್ತು ‘ವಿಕಸಿತ ಭಾರತಕ್ಕಾಗಿ ಓಟ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ‘2047ಕ್ಕೆ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ನೂರು ವರ್ಷಗಳಾಗುತ್ತವೆ. ಆ ಸಂದರ್ಭದಲ್ಲಿ ಜಗತ್ತಿನಲ್ಲಿ ಉನ್ನತ ಸ್ಥಾನಕ್ಕೆ ಭಾರತವನ್ನು ತಲುಪಿಸುವ ಗುರಿಯೊಂದಿಗೆ ವಿಕಸಿತ ಭಾರತ ಪರಿಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ. ಅದನ್ನು ಸಾಕಾರಗೊಳಿಸಲು ಎಲ್ಲರೂ ಶ್ರಮಿಸಬೇಕು’ ಎಂದರು.</p>.<p>‘ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು ರಾಷ್ಟ್ರಮಟ್ಟದಲ್ಲಿ ಕೇಂದ್ರ ಸರ್ಕಾರದೊಂದಿಗೆ ಕೈಜೋಡಿಸಿ ದೇಶವನ್ನು ಪ್ರಬಲ ಆರ್ಥಿಕ ಶಕ್ತಿಯನ್ನಾಗಿ ಮುನ್ನಡೆಸಲು ಲೆಕ್ಕಪರಿಶೋಧಕರ ಪ್ರಾದೇಶಿಕ ಮಂಡಳಿಗಳು ಹಾಗೂ ಶಾಖೆಗಳಲ್ಲಿ ವಿಕಸಿತ ಭಾರತದ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ’ ಎಂದು ಹೇಳಿದರು.</p>.<p>‘ಕಳೆದ ಹತ್ತು ವರ್ಷಗಳಲ್ಲಿ ರಸ್ತೆ ಅಭಿವೃದ್ಧಿ, ಉಜ್ವಲ ಯೋಜನೆ, ವಿಮಾನ ನಿಲ್ದಾಣಗಳ ಉನ್ನತೀಕರಣ, ಸರಕು ಸಾಗಾಣಿಕೆ ಅಭಿವೃದ್ಧಿ, ರೈಲ್ವೆ ಸಂಪರ್ಕ ಅಭಿವೃದ್ಧಿ ಸೇರಿದಂತೆ ಕೇಂದ್ರ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ’ ಎಂದರು.</p>.<p>ಮಹಾನಗರ ಪಾಲಿಕೆ ಸದಸ್ಯೆ ಉಮಾ ಮುಕುಂದ ಮಾತನಾಡಿ, ‘ಸ್ತ್ರೀ ಸಬಲೀಕರಣದ ಅಂಗವಾಗಿ ಕೇಂದ್ರ ಸರ್ಕಾರ ಮಹಿಳೆಯರಿಗೆ ಶೇ 33.33 ರಷ್ಟು ಮೀಸಲಾತಿ ನೀಡಿದೆ. ‘ಸಿಎ’ ಓದುತ್ತಿರುವ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉನ್ನತ ಹುದ್ದೆ ಅಲಂಕರಿಸಬೇಕು’ ಎಂದು ಹೇಳಿದರು.</p>.<p>ಸಂಸ್ಥೆಯ ಹುಬ್ಬಳ್ಳಿ ಶಾಖೆಯ ಅಧ್ಯಕ್ಷ ಧನಪಾಲ್ ಜೆ.ಮುನ್ನೊಳ್ಳಿ ಸ್ವಾಗತಿಸಿದರು. ಚಂದ್ರಶೇಖರ್ ಧವಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ರಿಷಬ್ ಉಪಾಧ್ಯಾಯ ವಂದಿಸಿದರು.</p>.<p>ವಿಕಸಿತ ಭಾರತ ಧ್ಯೇಯವಾಕ್ಯದ ಅಡಿ ಸಂಸ್ಥೆಯ ಎಲ್ಲ ಸದಸ್ಯರು ಹಾಗೂ ವಿದ್ಯಾರ್ಥಿಗಳ ಓಟದಲ್ಲಿ ಪಾಲ್ಗೊಂಡಿದ್ದರು. ಕೇಶ್ವಾಪುರದ ಐಸಿಎಐ ಭವನದಿಂದ ಪ್ರಾರಂಭವಾದ ಓಟ ಬಸವೇಶ್ವರ ವೃತ್ತದ ಮೂಲಕ ಪುನಃ ಐಸಿಎಐ ಭವನ ತಲುಪಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>