<p><strong>ಗುಡಗೇರಿ</strong>: ಮೂರು–ನಾಲ್ಕು ವರ್ಷಗಳಿಂದ ಹೆಚ್ಚು ಮಳೆ ಸುರಿಯುತ್ತಿರುವುದರಿಂದ ಸಾಂಪ್ರದಾಯಿಕ ಬೆಳೆ ಬಿಟ್ಟು ಈ ಬಾರಿ ರೈತರು ಮೆಕ್ಕೆಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದಾರೆ. ಆದರೆ, ಕನಿಷ್ಠ ಬೆಂಬಲ ಬೆಲೆಯಡಿ ಖರೀದಿ ಕೇಂದ್ರಗಳ ಆರಂಭಕ್ಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.</p>.<p>ಕುಂದಗೋಳ ತಾಲ್ಲೂಕಿನ ಗುಡಗೇರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷ ಮೆಣಸಿನಕಾಯಿ, ಹತ್ತಿ ಬೆಳೆ ಕ್ಷೇತ್ರ ಶೇ 80ರಷ್ಟು ಕಡಿಮೆ ಮಾಡಿ, ಆ ಪ್ರದೇಶಗಳಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಅತಿಯಾದ ಮಳೆಯಿಂದಾಗಿ ಬೆಳೆಯೂ ಉತ್ತಮವಾಗಿ ಬಂದಿದೆ. ಮಾರುಕಟ್ಟೆಯಲ್ಲಿ ದರ ಕುಸಿತದಿಂದ ರೈತರಿಗೆ ಕೈಗೆ ಬಂದ ತುತ್ತು, ಬಾಯಿಗೆ ಬರದಂತಾಗಿದೆ.</p>.<p>ಸರ್ಕಾರ ₹2,400ರ ದರದಲ್ಲಿ ಖರೀದಿ ಕೇಂದ್ರ ಮೂಲಕ ಪ್ರತಿ ರೈತರಿಂದ 50 ಕ್ವಿಂಟಲ್ ಮೆಕ್ಕೆಜೋಳ ಖರೀದಿಸುವುದಾಗಿ ಘೋಷಿಸಿದೆ. ಆದರೆ ಈವರೆಗೂ ಕುಂದುಗೋಳ ತಾಲ್ಲೂಕಿನಲ್ಲಿ ಖರೀದಿ ಕೇಂದ್ರ ಆರಂಭವಾಗದೆ ಇರುವುದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>‘ಕಳೆದ ವರ್ಷ ಅತಿ ಮಳೆಯಿಂದಾಗಿ ಮೆಣಸಿನಕಾಯಿ, ಹತ್ತಿ ಬೆಳೆ ಸಂಪೂರ್ಣ ಹಾಳಾಗಿತ್ತು. ಈ ಬಾರಿ ರೈತರು ಮೆಕ್ಕೆಜೋಳ ಬೆಳೆದಿದ್ದು ದರ ಕುಸಿತದಿಂದ ನಷ್ಟವಾಗುತ್ತಿದೆ. ಕೂಡಲೇ ಖರೀದಿ ಕೇಂದ್ರ ಆರಂಭಿಸಬೇಕು’ ಎಂದು ಗುಡಗೇರಿ ಗ್ರಾಮದ ರೈತ ಮಂಜುನಾಥ ಅಣ್ಣಿಗೇರಿ ಒತ್ತಾಯಿಸಿದರು.</p>.<p>‘ಉತ್ತಮ ಬೆಳೆ ಬಂದಾಗ ದರ ಕುಸಿದಿದೆ. ಖರೀದಿ ಕೇಂದ್ರ ಆರಂಭವಾಗದ ಕಾರಣ ಮೆಕ್ಕೆಜೋಳ ರಾಶಿ ಒಕ್ಕಲು ಮಾಡದಂತಾಗಿದೆ’ ಎಂದು ಕಳಸ ಗ್ರಾಮದ ರೈತ ಮುತ್ತು ಮೂಲಿಮನಿ ಅಳಲು ತೋಡಿಕೊಂಡರು.</p>.<p>ಸಾಲ ಮಾಡಿ ಬೆಳೆದ ಮೆಕ್ಕೆಜೋಳವು ಹಾಳಾಗುವ ಮುನ್ನ ಅಧಿಕಾರಿಗಳು, ಜನಪ್ರತಿನಿಧಿಗಳು ಖರೀದಿ ಕೇಂದ್ರ ಆರಂಭಿಸುವರೇ ಎಂದು ರೈತರು ಕಾಯುತ್ತ ಕೂರುವಂತಾಗಿದೆ.</p>.<p>ಮೆಕ್ಕೆಜೋಳ ಕ್ಷೇತ್ರ ಶೇ 80ರಷ್ಟು ಹೆಚ್ಚಳ ಮಾರುಕಟ್ಟೆಯಲ್ಲಿ ದರ ಕುಸಿತ ತಕ್ಷಣ ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ</p>.<div><blockquote>ಕುಂದಗೋಳ ತಾಲ್ಲೂಕಿನ ಕಳಸ ಸಂಶಿ ಕುಂದಗೋಳ ಕೂಬಿಹಾಳ ಯಲಿವಾಳ ಗ್ರಾಮಗಳಲ್ಲಿ ಖರೀದಿ ಕೇಂದ್ರಕ್ಕೆ ಗುರುತಿಸಿದ್ದು ಸರ್ಕಾರ ಆದೇಶ ಬಂದ ಬಳಿಕ ಆರಂಭಿಸಲಾಗುವುದು </blockquote><span class="attribution">ರಾಜು ಮಾವರಕರ ತಹಶೀಲ್ದಾರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಗೇರಿ</strong>: ಮೂರು–ನಾಲ್ಕು ವರ್ಷಗಳಿಂದ ಹೆಚ್ಚು ಮಳೆ ಸುರಿಯುತ್ತಿರುವುದರಿಂದ ಸಾಂಪ್ರದಾಯಿಕ ಬೆಳೆ ಬಿಟ್ಟು ಈ ಬಾರಿ ರೈತರು ಮೆಕ್ಕೆಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದಾರೆ. ಆದರೆ, ಕನಿಷ್ಠ ಬೆಂಬಲ ಬೆಲೆಯಡಿ ಖರೀದಿ ಕೇಂದ್ರಗಳ ಆರಂಭಕ್ಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.</p>.<p>ಕುಂದಗೋಳ ತಾಲ್ಲೂಕಿನ ಗುಡಗೇರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷ ಮೆಣಸಿನಕಾಯಿ, ಹತ್ತಿ ಬೆಳೆ ಕ್ಷೇತ್ರ ಶೇ 80ರಷ್ಟು ಕಡಿಮೆ ಮಾಡಿ, ಆ ಪ್ರದೇಶಗಳಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಅತಿಯಾದ ಮಳೆಯಿಂದಾಗಿ ಬೆಳೆಯೂ ಉತ್ತಮವಾಗಿ ಬಂದಿದೆ. ಮಾರುಕಟ್ಟೆಯಲ್ಲಿ ದರ ಕುಸಿತದಿಂದ ರೈತರಿಗೆ ಕೈಗೆ ಬಂದ ತುತ್ತು, ಬಾಯಿಗೆ ಬರದಂತಾಗಿದೆ.</p>.<p>ಸರ್ಕಾರ ₹2,400ರ ದರದಲ್ಲಿ ಖರೀದಿ ಕೇಂದ್ರ ಮೂಲಕ ಪ್ರತಿ ರೈತರಿಂದ 50 ಕ್ವಿಂಟಲ್ ಮೆಕ್ಕೆಜೋಳ ಖರೀದಿಸುವುದಾಗಿ ಘೋಷಿಸಿದೆ. ಆದರೆ ಈವರೆಗೂ ಕುಂದುಗೋಳ ತಾಲ್ಲೂಕಿನಲ್ಲಿ ಖರೀದಿ ಕೇಂದ್ರ ಆರಂಭವಾಗದೆ ಇರುವುದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>‘ಕಳೆದ ವರ್ಷ ಅತಿ ಮಳೆಯಿಂದಾಗಿ ಮೆಣಸಿನಕಾಯಿ, ಹತ್ತಿ ಬೆಳೆ ಸಂಪೂರ್ಣ ಹಾಳಾಗಿತ್ತು. ಈ ಬಾರಿ ರೈತರು ಮೆಕ್ಕೆಜೋಳ ಬೆಳೆದಿದ್ದು ದರ ಕುಸಿತದಿಂದ ನಷ್ಟವಾಗುತ್ತಿದೆ. ಕೂಡಲೇ ಖರೀದಿ ಕೇಂದ್ರ ಆರಂಭಿಸಬೇಕು’ ಎಂದು ಗುಡಗೇರಿ ಗ್ರಾಮದ ರೈತ ಮಂಜುನಾಥ ಅಣ್ಣಿಗೇರಿ ಒತ್ತಾಯಿಸಿದರು.</p>.<p>‘ಉತ್ತಮ ಬೆಳೆ ಬಂದಾಗ ದರ ಕುಸಿದಿದೆ. ಖರೀದಿ ಕೇಂದ್ರ ಆರಂಭವಾಗದ ಕಾರಣ ಮೆಕ್ಕೆಜೋಳ ರಾಶಿ ಒಕ್ಕಲು ಮಾಡದಂತಾಗಿದೆ’ ಎಂದು ಕಳಸ ಗ್ರಾಮದ ರೈತ ಮುತ್ತು ಮೂಲಿಮನಿ ಅಳಲು ತೋಡಿಕೊಂಡರು.</p>.<p>ಸಾಲ ಮಾಡಿ ಬೆಳೆದ ಮೆಕ್ಕೆಜೋಳವು ಹಾಳಾಗುವ ಮುನ್ನ ಅಧಿಕಾರಿಗಳು, ಜನಪ್ರತಿನಿಧಿಗಳು ಖರೀದಿ ಕೇಂದ್ರ ಆರಂಭಿಸುವರೇ ಎಂದು ರೈತರು ಕಾಯುತ್ತ ಕೂರುವಂತಾಗಿದೆ.</p>.<p>ಮೆಕ್ಕೆಜೋಳ ಕ್ಷೇತ್ರ ಶೇ 80ರಷ್ಟು ಹೆಚ್ಚಳ ಮಾರುಕಟ್ಟೆಯಲ್ಲಿ ದರ ಕುಸಿತ ತಕ್ಷಣ ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ</p>.<div><blockquote>ಕುಂದಗೋಳ ತಾಲ್ಲೂಕಿನ ಕಳಸ ಸಂಶಿ ಕುಂದಗೋಳ ಕೂಬಿಹಾಳ ಯಲಿವಾಳ ಗ್ರಾಮಗಳಲ್ಲಿ ಖರೀದಿ ಕೇಂದ್ರಕ್ಕೆ ಗುರುತಿಸಿದ್ದು ಸರ್ಕಾರ ಆದೇಶ ಬಂದ ಬಳಿಕ ಆರಂಭಿಸಲಾಗುವುದು </blockquote><span class="attribution">ರಾಜು ಮಾವರಕರ ತಹಶೀಲ್ದಾರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>