<p><strong>ಕುಂದಗೋಳ:</strong> ತಾಲ್ಲೂಕಿನಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭವಾಗದ ಕಾರಣ ರೈತರು ಪರದಾಡುವಂತಾಗಿದೆ. </p>.<p>ಎಂಐಎಸ್ (ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ) ಯೋಜನೆಯಡಿ ದರ ನಿಗದಿ ಮಾಡಿದ್ದು, ಕುಂದಗೋಳ ಎ.ಪಿ.ಎಂ.ಸಿಯಲ್ಲಿ ರೈತರು ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.</p>.<p>ಈ ಯೋಜನೆಯ ಸಹಾಯಧನ ಪಡೆಯಲು, ಎಫ್.ಐ.ಡಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಉತಾರ ದಾಖಲಾತಿ, ಬಯೊಮೆಟ್ರಿಕ್ ಮೂಲಕ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ನೋಂದಣಿ ನಂತರ ನಿಗದಿತ 8 ವ್ಯಾಪಾರಸ್ಥರ ಮೂಲಕ ಖರೀದಿ ಪ್ರಕ್ರಿಯೆ ನಡೆಯುತ್ತದೆ. </p>.<p>ರೈತರಿಂದ ವ್ಯಾಪಾರಸ್ಥರು ಖರೀದಿ ಮಾಡುವ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಲ್ಗೆ ₹250 ಸಹಾಯಧನ ನಿಡಲಾಗುತ್ತದೆ. ಎಕರೆಗೆ 12 ಕ್ವಿಂಟಲ್ನಂತೆ ಗರಿಷ್ಠ 50 ಕ್ವಿಂಟಲ್ಗೆ ಸಹಾಯಧನ ದೊರೆಯಲಿದೆ. ಸಹಾಯಧನ ಸೇರಿ ಪ್ರತಿ ಕ್ವಿಂಟಲ್ ದರ ₹2,150 ಎಂದು ಎ.ಪಿ.ಎಂ.ಸಿ ಕಾರ್ಯದರ್ಶಿ ಎಸ್.ಎನ್.ವಿನಾಯಕ ಮಾಹಿತಿ ನಿಡಿದರು.</p>.<p>ಈ ಕುರಿತು ರೈತ ಶಂಕರಗೌಡ ದೊಡ್ಡಮನಿ ಮಾತನಾಡಿ, ಎಕರೆಗೆ 20 ರಿಂದ30 ಕ್ವಿಂಟಲ್ ಇಳುವರಿ ಬಂದಿದೆ. ಆದರೆ, 50 ಕ್ವಿಂಟಲ್ ಮಾತ್ರ ಖರೀದಿಗೆ ನಿಗದಿಪಡಿಸಿದ್ದು, ಇದರಿಂದ ರೈತರಿಗೆ ಅನ್ಯಾಯವಾಗಲಿದೆ ಎಂದರು.</p>.<p>ಕುಂದಗೋಳ ಎ.ಪಿ.ಎಂ.ಸಿ ಯಲ್ಲಿ 300ಕ್ಕೂ ಹೆಚ್ಚು ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಆದರೆ, ಖರೀದಿ ಕೇಂದ್ರ ಆರಂಭವಾಗದ ಕಾರಣ ತೊಂದರೆಯಾಗಿದೆ ಎಂದು ರೈತರು ಅಳಲು ತೋಡಿಕೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಗೋಳ:</strong> ತಾಲ್ಲೂಕಿನಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭವಾಗದ ಕಾರಣ ರೈತರು ಪರದಾಡುವಂತಾಗಿದೆ. </p>.<p>ಎಂಐಎಸ್ (ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ) ಯೋಜನೆಯಡಿ ದರ ನಿಗದಿ ಮಾಡಿದ್ದು, ಕುಂದಗೋಳ ಎ.ಪಿ.ಎಂ.ಸಿಯಲ್ಲಿ ರೈತರು ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.</p>.<p>ಈ ಯೋಜನೆಯ ಸಹಾಯಧನ ಪಡೆಯಲು, ಎಫ್.ಐ.ಡಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಉತಾರ ದಾಖಲಾತಿ, ಬಯೊಮೆಟ್ರಿಕ್ ಮೂಲಕ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ನೋಂದಣಿ ನಂತರ ನಿಗದಿತ 8 ವ್ಯಾಪಾರಸ್ಥರ ಮೂಲಕ ಖರೀದಿ ಪ್ರಕ್ರಿಯೆ ನಡೆಯುತ್ತದೆ. </p>.<p>ರೈತರಿಂದ ವ್ಯಾಪಾರಸ್ಥರು ಖರೀದಿ ಮಾಡುವ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಲ್ಗೆ ₹250 ಸಹಾಯಧನ ನಿಡಲಾಗುತ್ತದೆ. ಎಕರೆಗೆ 12 ಕ್ವಿಂಟಲ್ನಂತೆ ಗರಿಷ್ಠ 50 ಕ್ವಿಂಟಲ್ಗೆ ಸಹಾಯಧನ ದೊರೆಯಲಿದೆ. ಸಹಾಯಧನ ಸೇರಿ ಪ್ರತಿ ಕ್ವಿಂಟಲ್ ದರ ₹2,150 ಎಂದು ಎ.ಪಿ.ಎಂ.ಸಿ ಕಾರ್ಯದರ್ಶಿ ಎಸ್.ಎನ್.ವಿನಾಯಕ ಮಾಹಿತಿ ನಿಡಿದರು.</p>.<p>ಈ ಕುರಿತು ರೈತ ಶಂಕರಗೌಡ ದೊಡ್ಡಮನಿ ಮಾತನಾಡಿ, ಎಕರೆಗೆ 20 ರಿಂದ30 ಕ್ವಿಂಟಲ್ ಇಳುವರಿ ಬಂದಿದೆ. ಆದರೆ, 50 ಕ್ವಿಂಟಲ್ ಮಾತ್ರ ಖರೀದಿಗೆ ನಿಗದಿಪಡಿಸಿದ್ದು, ಇದರಿಂದ ರೈತರಿಗೆ ಅನ್ಯಾಯವಾಗಲಿದೆ ಎಂದರು.</p>.<p>ಕುಂದಗೋಳ ಎ.ಪಿ.ಎಂ.ಸಿ ಯಲ್ಲಿ 300ಕ್ಕೂ ಹೆಚ್ಚು ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಆದರೆ, ಖರೀದಿ ಕೇಂದ್ರ ಆರಂಭವಾಗದ ಕಾರಣ ತೊಂದರೆಯಾಗಿದೆ ಎಂದು ರೈತರು ಅಳಲು ತೋಡಿಕೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>