ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೂತನ ಸರ್ಕಾರವು ಎಲ್ಲಾ ಇಲಾಖೆಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಜಾತಿವಾರು ಗಣತಿ ನಡೆಸಿ ಜನಸಂಖ್ಯೆ ಆಧಾರದಲ್ಲಿ ಸೌಲಭ್ಯಗಳನ್ನು ನೀಡಬೇಕು. ಖಾಸಗೀಕರಣ ನಿಲ್ಲಿಸಿ, ಸರ್ಕಾರದ ಅಧೀನದಲ್ಲಿಯೇ ಆಡಳಿತ ನಡೆಸಬೇಕು’ ಎಂದು ಒತ್ತಾಯಿಸಿದರು.