<p><strong>ಧಾರವಾಡ: </strong>ಪ್ರತಿಷ್ಠಿತ ಕೆಸಿಸಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಹೊರಕೇರಿ ಅವಿರೋಧವಾಗಿ ಆಯ್ಕೆಯಾದರು.</p>.<p>ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿಶುಕ್ರವಾರ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಹೊರಕೇರಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.ಏಕೈಕ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾ ಅಧಿಕಾರಿ ಎಂ.ಬಿ.ಪೂಜಾರ ಅವರು ಹೊರಕೇರಿ ಅವರ ಅವಿರೋಧವಾಗಿ ಆಯ್ಕೆಯನ್ನು ಘೋಷಿಸಿದರು.</p>.<p>ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ಬಾಪುಗೌಡ ಪಾಟೀಲ ರಾಜೀನಾಮೆ ನೀಡಿದ್ದರಿಂದ ಹೊಸ ಅಯ್ಕೆ ಪ್ರಕ್ರಿಯೆ ಶುಕ್ರವಾರ ಜರುಗಿತು. ಬದಲಾದ ರಾಜಕೀಯ ಬೆಳವಣಿಯಲ್ಲಿ ಬಿಜೆಪಿ ಬೆಂಬಲಿತ ಮಲ್ಲಿಕಾರ್ಜುನ ಹೊರಕೇರಿ ಅವರು ಅಧ್ಯಕ್ಷ ಗಾದಿಗೇರುವುದು ನಿಶ್ಚಿತವಾಗಿತ್ತು.</p>.<p>ಮಲ್ಲಿಕಾರ್ಜುನ ಅವರು ಅಮರಗೋಳ ಕ್ಷೇತ್ರದ ಪಾಲಿಕೆ ಸದಸ್ಯರಾಗಿದ್ದರು. ಕೆಸಿಸಿ ಬ್ಯಾಂಕ್ ನಿರ್ದೇಶಕರಾಗಿದ್ದ ಅವರು ಅಧ್ಯಕ್ಷ ಸ್ಥಾನದ ಪ್ರಭಲ ಆಕಾಂಕ್ಷಿಯಾಗಿದ್ದರು.</p>.<p>ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಹೊರಕೇರಿ ಅವರನ್ನು ಉಪಾಧ್ಯಕ್ಷ ಎಸ್.ವೈ.ಪಾಟೀಲ, ನಿರ್ದೇಶಕರಾದ ಗಂಗಾಧರ ಸಾತಣ್ಣವರ, ಶಿವಕುಮಾರಗೌಡ ಪಾಟೀಲ, ಮಂಜುನಾಥ ಮುರಳ್ಳಿ, ಜಿ.ಪಿ.ಪಾಟೀಲ ಇನ್ನಿತರರು ಅಭಿನಂದಿಸಿದರು.</p>.<p>ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಮುನಿಯಪ್ಪ, ಪ್ರಧಾನ ವ್ಯವಸ್ಥಾಪಕ ಶಿವಾನಂದ ಹೂಗಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>ಪ್ರತಿಷ್ಠಿತ ಕೆಸಿಸಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಹೊರಕೇರಿ ಅವಿರೋಧವಾಗಿ ಆಯ್ಕೆಯಾದರು.</p>.<p>ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿಶುಕ್ರವಾರ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಹೊರಕೇರಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.ಏಕೈಕ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾ ಅಧಿಕಾರಿ ಎಂ.ಬಿ.ಪೂಜಾರ ಅವರು ಹೊರಕೇರಿ ಅವರ ಅವಿರೋಧವಾಗಿ ಆಯ್ಕೆಯನ್ನು ಘೋಷಿಸಿದರು.</p>.<p>ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ಬಾಪುಗೌಡ ಪಾಟೀಲ ರಾಜೀನಾಮೆ ನೀಡಿದ್ದರಿಂದ ಹೊಸ ಅಯ್ಕೆ ಪ್ರಕ್ರಿಯೆ ಶುಕ್ರವಾರ ಜರುಗಿತು. ಬದಲಾದ ರಾಜಕೀಯ ಬೆಳವಣಿಯಲ್ಲಿ ಬಿಜೆಪಿ ಬೆಂಬಲಿತ ಮಲ್ಲಿಕಾರ್ಜುನ ಹೊರಕೇರಿ ಅವರು ಅಧ್ಯಕ್ಷ ಗಾದಿಗೇರುವುದು ನಿಶ್ಚಿತವಾಗಿತ್ತು.</p>.<p>ಮಲ್ಲಿಕಾರ್ಜುನ ಅವರು ಅಮರಗೋಳ ಕ್ಷೇತ್ರದ ಪಾಲಿಕೆ ಸದಸ್ಯರಾಗಿದ್ದರು. ಕೆಸಿಸಿ ಬ್ಯಾಂಕ್ ನಿರ್ದೇಶಕರಾಗಿದ್ದ ಅವರು ಅಧ್ಯಕ್ಷ ಸ್ಥಾನದ ಪ್ರಭಲ ಆಕಾಂಕ್ಷಿಯಾಗಿದ್ದರು.</p>.<p>ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಹೊರಕೇರಿ ಅವರನ್ನು ಉಪಾಧ್ಯಕ್ಷ ಎಸ್.ವೈ.ಪಾಟೀಲ, ನಿರ್ದೇಶಕರಾದ ಗಂಗಾಧರ ಸಾತಣ್ಣವರ, ಶಿವಕುಮಾರಗೌಡ ಪಾಟೀಲ, ಮಂಜುನಾಥ ಮುರಳ್ಳಿ, ಜಿ.ಪಿ.ಪಾಟೀಲ ಇನ್ನಿತರರು ಅಭಿನಂದಿಸಿದರು.</p>.<p>ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಮುನಿಯಪ್ಪ, ಪ್ರಧಾನ ವ್ಯವಸ್ಥಾಪಕ ಶಿವಾನಂದ ಹೂಗಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>