ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಕಾರ್ಯಕರ್ತರು ಪ್ರತಿ ಮೂರು ತಿಂಗಳಿಗೊಮ್ಮೆ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಸಮೀಕ್ಷೆ ನಡೆಸಿ, ಅಪೌಷ್ಟಿಕತೆಯ ಶಂಕೆ ಇದ್ದಲ್ಲಿ ಅಂಥ ಮಗುವನ್ನು ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞರ ಬಳಿ ಪರೀಕ್ಷೆಗೆ ಒಳಪಡಿಸುತ್ತಾರೆ. ನಂತರ ಪೌಷ್ಟಿಕ ಪುನರ್ವಸತಿ ಕೇಂದ್ರಕ್ಕೆ ಮಕ್ಕಳನ್ನು ದಾಖಲಿಸಿ, 14 ದಿನ ಅವರಿಗೆ ಬೇಕಾದ ಪೌಷ್ಟಿಕಾಂಶ ಯುಕ್ತ ಆಹಾರ ನೀಡಲಾಗುತ್ತದೆ. ಜೊತೆಗೆ ಈ ಮಕ್ಕಳ ತಾಯಂದಿರನ್ನೂ ಅಲ್ಲಿಯೇ ಉಳಿಸಿಕೊಂಡು, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ನೀಡಲಾಗುತ್ತದೆ.