<p><strong>ಧಾರವಾಡ:</strong> ‘ನಗರದ ಕುಂಭಾಪುರ ಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಮಾವು ಅಭಿವೃದ್ಧಿ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಮುಗಿಸಿ, ಬೆಳೆಗಾರರಿಗೆ ಅನುಕೂಲ ಮಾಡಿಕೊಡಲು ಉದ್ದೇಶಿಸಲಾಗಿದೆ’ ಎಂದು ಮಾವು ಅಭಿವೃದ್ಧಿ ಹಾಗೂ ಮಾರಾಟ ನಿಗಮದ ಅಧ್ಯಕ್ಷ ಬಿ.ಸಿ.ಮುದ್ದು ಗಂಗಾಧರ್ ಹೇಳಿದರು.</p>.<p>ತೋಟಗಾರಿಕೆ ಇಲಾಖೆ ಸಭಾಭವನದಲ್ಲಿ ಶುಕ್ರವಾರ ನಡೆದ ಮಾವು ಬೆಳೆಗಾರರ ಬಳಗದ ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನೈಸರ್ಗಿಕ ವಿಧಾನದಲ್ಲಿ ಮಾವು ಮಾಗಿಸಲು, ಬಿಸಿ ನೀರಿನ ಉಪಚಾರ, ಸಂಸ್ಕರಣೆ, ಪ್ಯಾಕೇಜಿಂಗ್ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಆರೋಗ್ಯಕರ ಹಣ್ಣುಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುತ್ತಿದೆ. ಬೆಳೆಗಾರರು ಕೇಂದ್ರವನ್ನು ಬಳಕೆ ಮಾಡಿಕೊಳ್ಳಬೇಕು’ ಎಂದರು. </p>.<p>‘ರಾಜ್ಯದಲ್ಲಿ 60 ಸಾವಿರ ಹೆಕ್ಟೇರ್ನಲ್ಲಿ ಮಾವು ಬೆಳೆ ಇದೆ. ಇಳುವರಿ ಉತ್ತಮವಾಗಿದೆ. ಹೆಚ್ಚು ಬೆಲೆ ಸಿಗುತ್ತಿಲ್ಲ. ವ್ಯವಸ್ಥಿತ ಮಾರುಕಟ್ಟೆ ಕಲ್ಪಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಹೇಳಿದರು. </p>.<p>ಮಾವು ಅಭಿವೃದ್ಧಿ ಕೇಂದ್ರಕ್ಕೆ 2026-27ರ ಸಾಲಿನ ಬಜೆಟ್ನಲ್ಲಿ ₹10 ಕೋಟಿ ಅನುದಾನ ಮೀಸಲಿಡಬೇಕು ಎಂದು ಮಾವು ಬೆಳೆಗಾರರ ಗೌರವ ಅಧ್ಯಕ್ಷ ರಾಜೇಂದ್ರ ಪೋದ್ಧಾರ ಅವರು ಮನವಿಪತ್ರ ಸಲ್ಲಿಸಿದರು.</p>.<p>ಮಾವು ಬೆಳೆಗಾರರ ಬಳಗದ ಅಧ್ಯಕ್ಷ ಸುಭಾಸ ಆಕಳವಾಡಿ, ಉಪಾಧ್ಯಕ್ಷ ಪ್ರಮೋದ ಗಾಂವ್ಕರ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಕಾಶಿನಾಥ ಭದ್ರಣ್ಣವರ, ಮಾವು ಅಭಿವೃದ್ಧಿ ಕೇಂದ್ರದ ಉಪನಿರ್ದೇಶಕ ಸಂತೋಷ ಸಪ್ಪಂಡಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ನಗರದ ಕುಂಭಾಪುರ ಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಮಾವು ಅಭಿವೃದ್ಧಿ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಮುಗಿಸಿ, ಬೆಳೆಗಾರರಿಗೆ ಅನುಕೂಲ ಮಾಡಿಕೊಡಲು ಉದ್ದೇಶಿಸಲಾಗಿದೆ’ ಎಂದು ಮಾವು ಅಭಿವೃದ್ಧಿ ಹಾಗೂ ಮಾರಾಟ ನಿಗಮದ ಅಧ್ಯಕ್ಷ ಬಿ.ಸಿ.ಮುದ್ದು ಗಂಗಾಧರ್ ಹೇಳಿದರು.</p>.<p>ತೋಟಗಾರಿಕೆ ಇಲಾಖೆ ಸಭಾಭವನದಲ್ಲಿ ಶುಕ್ರವಾರ ನಡೆದ ಮಾವು ಬೆಳೆಗಾರರ ಬಳಗದ ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನೈಸರ್ಗಿಕ ವಿಧಾನದಲ್ಲಿ ಮಾವು ಮಾಗಿಸಲು, ಬಿಸಿ ನೀರಿನ ಉಪಚಾರ, ಸಂಸ್ಕರಣೆ, ಪ್ಯಾಕೇಜಿಂಗ್ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಆರೋಗ್ಯಕರ ಹಣ್ಣುಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುತ್ತಿದೆ. ಬೆಳೆಗಾರರು ಕೇಂದ್ರವನ್ನು ಬಳಕೆ ಮಾಡಿಕೊಳ್ಳಬೇಕು’ ಎಂದರು. </p>.<p>‘ರಾಜ್ಯದಲ್ಲಿ 60 ಸಾವಿರ ಹೆಕ್ಟೇರ್ನಲ್ಲಿ ಮಾವು ಬೆಳೆ ಇದೆ. ಇಳುವರಿ ಉತ್ತಮವಾಗಿದೆ. ಹೆಚ್ಚು ಬೆಲೆ ಸಿಗುತ್ತಿಲ್ಲ. ವ್ಯವಸ್ಥಿತ ಮಾರುಕಟ್ಟೆ ಕಲ್ಪಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಹೇಳಿದರು. </p>.<p>ಮಾವು ಅಭಿವೃದ್ಧಿ ಕೇಂದ್ರಕ್ಕೆ 2026-27ರ ಸಾಲಿನ ಬಜೆಟ್ನಲ್ಲಿ ₹10 ಕೋಟಿ ಅನುದಾನ ಮೀಸಲಿಡಬೇಕು ಎಂದು ಮಾವು ಬೆಳೆಗಾರರ ಗೌರವ ಅಧ್ಯಕ್ಷ ರಾಜೇಂದ್ರ ಪೋದ್ಧಾರ ಅವರು ಮನವಿಪತ್ರ ಸಲ್ಲಿಸಿದರು.</p>.<p>ಮಾವು ಬೆಳೆಗಾರರ ಬಳಗದ ಅಧ್ಯಕ್ಷ ಸುಭಾಸ ಆಕಳವಾಡಿ, ಉಪಾಧ್ಯಕ್ಷ ಪ್ರಮೋದ ಗಾಂವ್ಕರ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಕಾಶಿನಾಥ ಭದ್ರಣ್ಣವರ, ಮಾವು ಅಭಿವೃದ್ಧಿ ಕೇಂದ್ರದ ಉಪನಿರ್ದೇಶಕ ಸಂತೋಷ ಸಪ್ಪಂಡಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>