‘ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸುವುದರಿಂದಲೇ ಹೆಚ್ಚಿನ ಪ್ರಮಾಣದಲ್ಲಿ ಸಾವು-ನೋವು ಸಂಭವಿಸುತ್ತಿವೆ. ಹೆಲ್ಮೆಟ್ ಧರಿಸದವರಿಗೆ ದಂಡ ಹಾಕಿ, ತಿಳಿ ಹೇಳಿ ಕಳಿಸಿದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ನಗರದೊಳಗೆ ವೇಗದ ಮಿತಿ 40-50ಕ್ಕೆ ಸೀಮಿತಗೊಳಿದ್ದರೂ, ಕೆಲವರು ವೇಗವಾಗಿ ವಾಹನ ಚಲಾಯಿಸುವುದು ಅಪಘಾತಕ್ಕೆ ಪ್ರಮುಖ ಕಾರಣ. ಪ್ರತಿ ಜೀವ ಅಮೂಲ್ಯವಾಗಿರುವ ಕಾರಣ ಚಾಲಕರು ನಿರ್ಲಕ್ಷ್ಯ ಮಾಡಬಾರದು’ ಎಂದು ಸಂಚಾರ ಪೊಲೀಸರು ತಿಳಿಸುತ್ತಾರೆ.