<p><strong>ಧಾರವಾಡ:</strong> ನಗರದ ದೊಡ್ಡನಾಯಕನಕೊಪ್ಪದಲ್ಲಿ ನಿರ್ಮಿಸಿದ ಮರಾಠ ಸಮುದಾಯ ಭವನದ ಉದ್ಘಾಟನಾ ಸಮಾರಂಭ ಮೇ 24ರಂದು ನಡೆಯಲಿದೆ ಎಂದು ಮರಾಠ ಸಮಾಜ ಸಂಘಟನೆ ಅಧ್ಯಕ್ಷ ಪ್ರತಾಪ ಅರ್ಜುನರಾವ್ ಚವಾಣ್ ತಿಳಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಮಾಜಿ ಶಾಸಕ ಡಿ.ಆರ್.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸಮುದಾಯ ಭವನ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭೋಜನಾಲಯ ಉದ್ಘಾಟಿಸುವರು ಎಂದರು. </p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ನಾಮಫಲಕ ಅನಾವರಣಗೊಳಿಸುವರು ಎಂದು ಹೇಳಿದರು. </p>.<p>ಮರಾಠ ಸಮಾಜದ ಯುವ ವೇದಿಕೆ ಉಪಾಧ್ಯಕ್ಷ ಪಾಪು ಧಾರೆ ಮಾತನಾಡಿ, ಮರಾಠಾ ಸಮುದಾಯ ಭವನವನ್ನು ಉದ್ಯೋಗ ಮೇಳ, ಸ್ಪರ್ಧಾ ಪರೀಕ್ಷೆ ತರಬೇತಿ ಸೇರಿದಂತೆ ಸಮಾಜದ ಸಂಘಟನಾ ಕಾರ್ಯಕ್ರಮಗಳಿಗೆ ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದರು. </p>.<p>ಚಂದ್ರಶೇಖರ ಪವಾರ, ಸಹದೇವ ಮಾನೆ, ಮಾತೇಶ ಜಾಧವ, ಉದಯ ಕಾಳೆ, ಮಾರ್ತಾಂಡಪ್ಪ ಜಾಧವ, ಅರುಣ, ವಸಂತ ಕುಂಟೆ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ನಗರದ ದೊಡ್ಡನಾಯಕನಕೊಪ್ಪದಲ್ಲಿ ನಿರ್ಮಿಸಿದ ಮರಾಠ ಸಮುದಾಯ ಭವನದ ಉದ್ಘಾಟನಾ ಸಮಾರಂಭ ಮೇ 24ರಂದು ನಡೆಯಲಿದೆ ಎಂದು ಮರಾಠ ಸಮಾಜ ಸಂಘಟನೆ ಅಧ್ಯಕ್ಷ ಪ್ರತಾಪ ಅರ್ಜುನರಾವ್ ಚವಾಣ್ ತಿಳಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಮಾಜಿ ಶಾಸಕ ಡಿ.ಆರ್.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸಮುದಾಯ ಭವನ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭೋಜನಾಲಯ ಉದ್ಘಾಟಿಸುವರು ಎಂದರು. </p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ನಾಮಫಲಕ ಅನಾವರಣಗೊಳಿಸುವರು ಎಂದು ಹೇಳಿದರು. </p>.<p>ಮರಾಠ ಸಮಾಜದ ಯುವ ವೇದಿಕೆ ಉಪಾಧ್ಯಕ್ಷ ಪಾಪು ಧಾರೆ ಮಾತನಾಡಿ, ಮರಾಠಾ ಸಮುದಾಯ ಭವನವನ್ನು ಉದ್ಯೋಗ ಮೇಳ, ಸ್ಪರ್ಧಾ ಪರೀಕ್ಷೆ ತರಬೇತಿ ಸೇರಿದಂತೆ ಸಮಾಜದ ಸಂಘಟನಾ ಕಾರ್ಯಕ್ರಮಗಳಿಗೆ ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದರು. </p>.<p>ಚಂದ್ರಶೇಖರ ಪವಾರ, ಸಹದೇವ ಮಾನೆ, ಮಾತೇಶ ಜಾಧವ, ಉದಯ ಕಾಳೆ, ಮಾರ್ತಾಂಡಪ್ಪ ಜಾಧವ, ಅರುಣ, ವಸಂತ ಕುಂಟೆ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>