‘ಮರಾಠಿಗರ ಬೇಡಿಕೆ ಈಡೇರಿಸುವ ಆತುರದಲ್ಲಿ ಕನ್ನಡಿಗರಿಗೆ ಮುಳುವಾಗುವಂಥ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಒಂದೊಂದು ಭಾಷಿಕರಿಗೆ ನಿಗಮಗಳನ್ನು ಸ್ಥಾಪಿಸಿದರೆ, ರಾಜ್ಯದಲ್ಲಿ ನೆಲೆಸಿರುವ ಅನ್ಯ ಭಾಷಿಕರು ಕೂಡ ತಮಗೆ ನಿಗಮ ಬೇಕು ಎನ್ನುವ ಬೇಡಿಕೆ ಮುಂದಿಡಬಹುದು. ಒಂದು ವೇಳೆ ಹೀಗಾದರೆ ಕನ್ನಡಿಗರು ತಾಯ್ನಾಡಿನಲ್ಲಿಯೇ ಭೀತಿಯಿಂದ ಬದುಕಬೇಕಾಗುತ್ತದೆ. ಆದ್ದರಿಂದ ಮರಾಠಾ ನಿಗಮ ಸ್ಥಾಪನೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.