<p><strong>ಹುಬ್ಬಳ್ಳಿ</strong>: ಸುಪ್ರೀಂಕೋರ್ಟ್ ತೀರ್ಪಿನಂತೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣ ಶೀಘ್ರ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿಗಳ ಸಾಮರಸ್ಯ ಐಕ್ಯತಾ ಒಕ್ಕೂಟದ ವತಿಯಿಂದ ನಗರದಲ್ಲಿ ಬುಧವಾರ ಮೆರವಣಿಗೆ ನಡೆಸಲಾಯಿತು.</p>.<p>ಇಂದಿರಾ ಗಾಜಿನಮನೆಯಲ್ಲಿರುವ ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖಂಡರು ಮೆರವಣಿಗೆಗೆ ಚಾಲನೆ ನೀಡಿದರು. ಅಲ್ಲಿಂದ ಅಂಬೇಡ್ಕರ್ ವೃತ್ತದವರೆಗೆ ಸಾಗಿ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಒಳಮೀಸಲಾತಿ ಹೋರಾಟದಲ್ಲಿ ಬಲಿದಾನ ಮಾಡಿದವರಿಗೆ ನಮಿಸಲಾಯಿತು.</p>.<p>ಮಿನಿವಿಧಾನಸೌಧದಲ್ಲಿ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿ, ಒಳಮೀಸಲಾತಿ ವರ್ಗೀಕರಣ ಜಾರಿ ಬಳಿಕವೇ ನೇಮಕಾತಿ, ಮುಂಬಡ್ತಿ ಮುಂದುವರಿಸಬೇಕು ಹಾಗೂ ಡೋಹರ ಸಮುದಾಯವನ್ನು ಮರಳಿ ಪರಿಶಿಷ್ಟ ಸಮುದಾಯಕ್ಕೆ ಸೇರ್ಪಡೆ ಮಾಡಬೇಕೆಂದು ಆಗ್ರಹಿಸಲಾಯಿತು.</p>.<p>ಸಂಚಾಲಕ ವಿಜಯ ಗುಂಟ್ರಾಳ, ಬಸಪ್ಪ ಮಾದರ, ವೀರಭದ್ರಪ್ಪ ಹಾಲಹರವಿ, ಸುರೇಶ ಕಣಮಕ್ಕಲ, ರವಿ ಕಲ್ಯಾಣಿ, ಸಹದೇವ ಮಾಳಗಿ, ಮಂಜುನಾಥ ಸಣ್ಣಕಿ, ಭೀಮು ಹಲಗಿ, ಶಂಕರ ಅಜಮನಿ, ಮೇಘರಾಜ್ ಹಿರೇಮನಿ, ಬಸವರಾಜ ನಾರಾಯಣಕಾರ, ಸಂತೋಷ ಚಲವಾದಿ, ರವೀಂದ್ರ ಇಟ್ಟಿಗಾರ, ಇಂದೂಮತಿ ಶಿರಗಾವಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಸುಪ್ರೀಂಕೋರ್ಟ್ ತೀರ್ಪಿನಂತೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣ ಶೀಘ್ರ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿಗಳ ಸಾಮರಸ್ಯ ಐಕ್ಯತಾ ಒಕ್ಕೂಟದ ವತಿಯಿಂದ ನಗರದಲ್ಲಿ ಬುಧವಾರ ಮೆರವಣಿಗೆ ನಡೆಸಲಾಯಿತು.</p>.<p>ಇಂದಿರಾ ಗಾಜಿನಮನೆಯಲ್ಲಿರುವ ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖಂಡರು ಮೆರವಣಿಗೆಗೆ ಚಾಲನೆ ನೀಡಿದರು. ಅಲ್ಲಿಂದ ಅಂಬೇಡ್ಕರ್ ವೃತ್ತದವರೆಗೆ ಸಾಗಿ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಒಳಮೀಸಲಾತಿ ಹೋರಾಟದಲ್ಲಿ ಬಲಿದಾನ ಮಾಡಿದವರಿಗೆ ನಮಿಸಲಾಯಿತು.</p>.<p>ಮಿನಿವಿಧಾನಸೌಧದಲ್ಲಿ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿ, ಒಳಮೀಸಲಾತಿ ವರ್ಗೀಕರಣ ಜಾರಿ ಬಳಿಕವೇ ನೇಮಕಾತಿ, ಮುಂಬಡ್ತಿ ಮುಂದುವರಿಸಬೇಕು ಹಾಗೂ ಡೋಹರ ಸಮುದಾಯವನ್ನು ಮರಳಿ ಪರಿಶಿಷ್ಟ ಸಮುದಾಯಕ್ಕೆ ಸೇರ್ಪಡೆ ಮಾಡಬೇಕೆಂದು ಆಗ್ರಹಿಸಲಾಯಿತು.</p>.<p>ಸಂಚಾಲಕ ವಿಜಯ ಗುಂಟ್ರಾಳ, ಬಸಪ್ಪ ಮಾದರ, ವೀರಭದ್ರಪ್ಪ ಹಾಲಹರವಿ, ಸುರೇಶ ಕಣಮಕ್ಕಲ, ರವಿ ಕಲ್ಯಾಣಿ, ಸಹದೇವ ಮಾಳಗಿ, ಮಂಜುನಾಥ ಸಣ್ಣಕಿ, ಭೀಮು ಹಲಗಿ, ಶಂಕರ ಅಜಮನಿ, ಮೇಘರಾಜ್ ಹಿರೇಮನಿ, ಬಸವರಾಜ ನಾರಾಯಣಕಾರ, ಸಂತೋಷ ಚಲವಾದಿ, ರವೀಂದ್ರ ಇಟ್ಟಿಗಾರ, ಇಂದೂಮತಿ ಶಿರಗಾವಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>