ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಶುಕ್ರವಾರ ನಡೆದ ಎಪಿಎಂಸಿ ವ್ಯಾಪಾರಸ್ಥರ ಸಭೆಯ ನಂತರ ಮಾತನಾಡಿದ ಅವರು, 'ಶೇ 35 ಇದ್ದ ಮಾರುಕಟ್ಟೆ ಶುಲ್ಕವನ್ನು ಸರ್ಕಾರ ಏಕಾಏಕಿ ಶೇ 1ಕ್ಕೆ ಹೆಚ್ಚಳ ಮಾಡಿದೆ. ಕೋವಿಡ್'ನಿಂದ ವ್ಯಾಪಾರ, ವಹಿವಾಟುಗಳು ಸರಿಯಾಗಿ ನಡೆಯದೆ ವರ್ತಕರು ತೀವ್ರ ಸಮಸ್ಯೆ ಅನುಭವಿಸಿದ್ದರು. ವ್ಯಾಪಾರ ಚೇತರಿಸಿಕೊಳ್ಳುತ್ತಿದೆ ಎನ್ನುತ್ತಿರುವಾಗ ಮಾರುಕಟ್ಟೆ ಶುಲ್ಕ ಹೆಚ್ಚಳ ಮಾಡಿರುವುದು ಸರಿಯಲ್ಲ. ಇದನ್ನು ವಿರೋಧಿಸಿ ಸೋಮವಾರ ರಾಜ್ಯದಾದ್ಯಂತ ಎಪಿಎಂಸಿ ಬಂದ್'ಗೆ ಕರೆ ನೀಡಲಾಗಿದೆ' ಎಂದರು.