<p><strong>ಹುಬ್ಬಳ್ಳಿ:</strong> ‘ಹೆಗ್ಗೇರಿಯ ಮಾರುತಿ ನಗರದ 5 ಎಕರೆ 28 ಗುಂಟೆ ಜಾಗ ಕಂದಾಯ ಇಲಾಖೆಯಿಂದ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಗೆ ಹಸ್ತಾಂತರಗೊಂಡಿದ್ದು, ಶೀಘ್ರ ಅಲ್ಲಿನ ಜನರಿಗೆ ಹಕ್ಕುಪತ್ರ ವಿತರಿಸಲಾಗುವುದು’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.</p>.<p>ನಗರದ ವಾರ್ಡ್ ನಂ– 52ರ ಹೆಗ್ಗೇರಿಯ ಮಾರುತಿ ನಗರದಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ₹1 ಕೋಟಿ ಅನುದಾನದಡಿ ಸಿ.ಸಿ ರಸ್ತೆ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಮಾರುತಿ ನಗರವನ್ನು ಕೊಳೆಗೇರಿ ಅಭಿವೃದ್ಧಿ ಮಂಡಳಿ ವ್ಯಾಪ್ತಿಗೆ ತಂದು ಸೌಲಭ್ಯ ಒದಗಿಸಬೇಕು ಎಂದು ಆ ಭಾಗದ ಶಾಸಕರು, ಹು–ಧಾ ಮಹಾನಗರ ಪಾಲಿಕೆ ಸದಸ್ಯರು ಬೇಡಿಕೆ ಇಟ್ಟಿದ್ದರು. ಮನವಿಗೆ ಸ್ಪಂದಿಸಲಾಗಿದ್ದು, ಶೀಘ್ರ ಮಂಡಳಿಯಿಂದ ಸರ್ವೆ ಮಾಡಿಸಿ, ಗಡಿ ಗುರುತಿಸಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು’ ಎಂದು ತಿಳಿಸಿದರು.</p>.<p>‘ರಾಜ್ಯದಾದ್ಯಂತ ಮಂಡಳಿ ವತಿಯಿಂದ 42 ಸಾವಿರ ಮನೆಗಳು ನಿರ್ಮಾಣವಾಗಿವೆ. ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನ.29ರಂದು ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಏಕಕಾಲಕ್ಕೆ ರಾಜ್ಯದ ಎಲ್ಲ ಫಲಾನುಭವಿಗಳಿಗೆ ಕೀ ವಿತರಿಸಿ ಮನೆಗಳ ಹಸ್ತಾಂತರಿಸಲಾಗುವುದು’ ಎಂದರು.</p>.<p>ಹು–ಧಾ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ, ಮಹಾನಗರ ಪಾಲಿಕೆ ಸದಸ್ಯರಾದ ಚೇತನ ಹಿರೇಕೆರೂರ, ಹೆಗ್ಗೇರಿ ಮಾರುತಿ ನಗರದ ಮುಖಂಡರು, ನಿವಾಸಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಹೆಗ್ಗೇರಿಯ ಮಾರುತಿ ನಗರದ 5 ಎಕರೆ 28 ಗುಂಟೆ ಜಾಗ ಕಂದಾಯ ಇಲಾಖೆಯಿಂದ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಗೆ ಹಸ್ತಾಂತರಗೊಂಡಿದ್ದು, ಶೀಘ್ರ ಅಲ್ಲಿನ ಜನರಿಗೆ ಹಕ್ಕುಪತ್ರ ವಿತರಿಸಲಾಗುವುದು’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.</p>.<p>ನಗರದ ವಾರ್ಡ್ ನಂ– 52ರ ಹೆಗ್ಗೇರಿಯ ಮಾರುತಿ ನಗರದಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ₹1 ಕೋಟಿ ಅನುದಾನದಡಿ ಸಿ.ಸಿ ರಸ್ತೆ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಮಾರುತಿ ನಗರವನ್ನು ಕೊಳೆಗೇರಿ ಅಭಿವೃದ್ಧಿ ಮಂಡಳಿ ವ್ಯಾಪ್ತಿಗೆ ತಂದು ಸೌಲಭ್ಯ ಒದಗಿಸಬೇಕು ಎಂದು ಆ ಭಾಗದ ಶಾಸಕರು, ಹು–ಧಾ ಮಹಾನಗರ ಪಾಲಿಕೆ ಸದಸ್ಯರು ಬೇಡಿಕೆ ಇಟ್ಟಿದ್ದರು. ಮನವಿಗೆ ಸ್ಪಂದಿಸಲಾಗಿದ್ದು, ಶೀಘ್ರ ಮಂಡಳಿಯಿಂದ ಸರ್ವೆ ಮಾಡಿಸಿ, ಗಡಿ ಗುರುತಿಸಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು’ ಎಂದು ತಿಳಿಸಿದರು.</p>.<p>‘ರಾಜ್ಯದಾದ್ಯಂತ ಮಂಡಳಿ ವತಿಯಿಂದ 42 ಸಾವಿರ ಮನೆಗಳು ನಿರ್ಮಾಣವಾಗಿವೆ. ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನ.29ರಂದು ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಏಕಕಾಲಕ್ಕೆ ರಾಜ್ಯದ ಎಲ್ಲ ಫಲಾನುಭವಿಗಳಿಗೆ ಕೀ ವಿತರಿಸಿ ಮನೆಗಳ ಹಸ್ತಾಂತರಿಸಲಾಗುವುದು’ ಎಂದರು.</p>.<p>ಹು–ಧಾ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ, ಮಹಾನಗರ ಪಾಲಿಕೆ ಸದಸ್ಯರಾದ ಚೇತನ ಹಿರೇಕೆರೂರ, ಹೆಗ್ಗೇರಿ ಮಾರುತಿ ನಗರದ ಮುಖಂಡರು, ನಿವಾಸಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>