ಕುಂದಗೋಳ: ತಾಲ್ಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ಮಾಜಿ ಶಾಸಕ ದಿ.ಗೋವಿಂದಪ್ಪ ಜುಟ್ಟಲ್ ಅವರ 16ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ಗೋವಿಂದಪ್ಪ.ಹ.ಜುಟ್ಟಲ್ ಪ್ರತಿಷ್ಠಾನ ಸಮಿತಿ ಹಾಗೂ ಜನಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಮೇ 5ರಂದು 501ಜೋಡಿಗಳ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಗೋ ಜುಟ್ಟಲ್ ಹೇಳಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಗ್ರಾಮದಲ್ಲಿ ಸಾಮೂಹಿಕ ವಿವಾಹಗಳನ್ನು ಸತತವಾಗಿ 17 ವರ್ಷಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದು ಇತ್ತೀಚೆಗೆ 3 ವರ್ಷಗಳಲ್ಲಿ ಚುನಾವಣೆ ಮತ್ತು ಕೊರೊನಾದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಿರಲಿಲ್ಲ. ವಿವಾಹವಾಗಲು ಇಚ್ಚಿಸುವ ವಧುವಿಗೆ ತಾಳಿ, ಕಾಲುಂಗುರ, ಬಾಸಿಂಗ ಹಾಗೂ ವರನಿಗೆ ದೋತಿ ಶರ್ಟು ಬಾಸಿಂಗ ಉಚಿತವಾಗಿ ಕೊಡಲಾಗುವುದು ಎಂದು ಹೇಳಿದರು.
ವಿವಾಹವಾಗಲು ಬಯಸುವವರು ಸರ್ಕಾರದ ನಿಯಮದ ಪ್ರಕಾರ ಅರ್ಹತೆ ಹೊಂದಿರಬೇಕು. ಈ ಸಂದರ್ಭದಲ್ಲಿ ಎರಡನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ ಮತ್ತು ರಹವಾಸಿ ದೃಢೀಕರಣ ಪತ್ರ ಕೊಡಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8095746106, 8073914578 ಸಂಪರ್ಕಿಸಬೇಕು.