ಬ್ರಾಹ್ಮಣ ಸಮಾಜದ ಮುಖಂಡ ಎ.ಸಿ.ಗೋಪಾಲ ಮಾತನಾಡಿ, ‘ಕನ್ನಡ ಸಾಹಿತ್ಯಕ್ಕೆ ಪುರಂದರದಾಸರ ಕೊಡುಗೆ ಅನನ್ಯ. ಕೀರ್ತನೆ, ಭಕ್ತಿ ಮಾರ್ಗದ ಮೂಲಕ ಸಮಾಜದಲ್ಲಿನ ಅಜ್ಞಾನ ಹೋಗಲಾಡಿಸಲು ಶ್ರಮಿಸಿದ್ದಾರೆ. ಹಣ, ಆಸ್ತಿಗಿಂತ ಧರ್ಮ ಮಾರ್ಗವೇ ಮೇಲು ಎನ್ನುವ ಮೂಲಕ, ಅದರಂತೆ ಬದುಕಿ ತೋರಿಸಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಸಾಗಬೇಕಿದೆ’ ಎಂದು ಹೇಳಿದರು.