ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಪ್ರತ್ಯೇಕ ಸಾಫ್ಟ್ವೇರ್ ಅಭಿವೃದ್ಧಿಪಡಿ, ಲಾಗುವುದು ಎಂದು ಹುಬ್ಬಳ್ಳಿ- ಧಾರವಾಡ ಮೇಯರ್ ಈರೇಶ ಅಂಚಟಗೇರಿ ಹೇಳಿದರು.
ಹುಬ್ಬಳ್ಳಿಯಲ್ಲಿ ಗುರುವಾರ ನಡೆದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಮಹಾನಗರದ ವೇಗವಾದ ಅಭಿವೃದ್ಧಿಗೆ ಪೂರಕವಾಗಿ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದರು.
ಮೇಯರ್ ಭಾಷಣಕ್ಕೆ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಉಪ ಮೇಯರ್ ಉಮಾ ಮುಕುಂದ, ಆಯುಕ್ತ ಡಾ. ಗೋಪಾಲಕೃಷ್ಣ ಬಿ, ಹೆಚ್ಚುವರಿ ಆಯುಕ್ತ ಶಂಕಾರನಂದ ಬನಶಂಕರಿ, ಅಧಿಕಾರಿಗಳು ಹಾಗುಹ ಸದಸ್ಯರು ಇದ್ದರು.