ಮಂಗಳವಾರ ಬೆಳಿಗ್ಗೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಅಲ್ಲದೇ, ಗೃಹ ಇಲಾಖೆ ನಿಷ್ಕ್ರಿಯವಾಗಿಯೂ ಇಲ್ಲ. ಸಾಮಾನ್ಯವಾಗಿ ಅವರು ಬಳಸುವ ಮೊಬೈಲ್ ಜಾಡು ಹಿಡಿದು ಪತ್ತೆ ಹಚ್ಚಲಾಗುತ್ತದೆ. ಇದರ ಮುನ್ಸೂಚನೆ ಅರಿತ ಗಣೇಶ ಸಿಮ್ ಕಿತ್ತು ಹಾಕಿ, ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಹೀಗಾಗಿ ಪತ್ತೆ ಕಾರ್ಯ ತಡವಾಗಿದೆ. ಆದರೆ, ಶೀಘ್ರವೇ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತೇವೆ‘ ಎಂದರು.