<p><strong>ಧಾರವಾಡ: ‘</strong>ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>‘ಗೃಹ ಜ್ಯೋತಿ ಫಲಾನುಭವಿಗಳಿಗೆ ಸೌಲಭ್ಯ ಸಿಗಬೇಕು. ಗ್ರಾಮೀಣ ಭಾಗದಲ್ಲಿ ಹಲವು ಲೈನ್ಮೆನ್ಗಳು ಸಹಾಯಕರನ್ನು ನೇಮಿಸಿಕೊಂಡು ಕೆಲಸ ಮಾಡಿಸುತ್ತಾರೆಂಬ ದೂರುಗಳಿವೆ. ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಈ ಬಗ್ಗೆ ಪರಿಶೀಲಿಸಿ, ಕ್ರಮ ವಹಿಸಬೇಕು’ ಎಂದರು.</p>.<p>‘ಪಡಿತರ ಸರಿಯಾಗಿ ವಿತರಣೆ ಮಾಡದ, ಅಕ್ರಮ ನಡೆಸುವ ನ್ಯಾಯಬೆಲೆ ಅಂಗಡಿಗಳಿದ್ದರೆ ಪತ್ತೆ ಹಚ್ಚಿ ಪರವಾನಗಿ ರದ್ದುಗೊಳಿಸಬೇಕು’ ಎಂದು ಹೇಳಿದರು.</p>.<p>‘ಗೃಹಲಕ್ಷ್ಮಿ ಯೋಜನೆಯ ಮೇ ತಿಂಗಳ ಹಣ ಎರಡು ದಿನಗಳಲ್ಲಿ ಜಮೆ ಆಗಲಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಉಪಾಧ್ಯಕ್ಷ ಮುರಗಯ್ಯ ವಿರಕ್ತಮಠ, ಶಾಂತಪ್ಪ ಅಕ್ಕಿ, ರೇಹನ್ ರಝಾ ಐನಾಪೂರಿ, ರತ್ನಾ ತೇಗೂರಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: ‘</strong>ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>‘ಗೃಹ ಜ್ಯೋತಿ ಫಲಾನುಭವಿಗಳಿಗೆ ಸೌಲಭ್ಯ ಸಿಗಬೇಕು. ಗ್ರಾಮೀಣ ಭಾಗದಲ್ಲಿ ಹಲವು ಲೈನ್ಮೆನ್ಗಳು ಸಹಾಯಕರನ್ನು ನೇಮಿಸಿಕೊಂಡು ಕೆಲಸ ಮಾಡಿಸುತ್ತಾರೆಂಬ ದೂರುಗಳಿವೆ. ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಈ ಬಗ್ಗೆ ಪರಿಶೀಲಿಸಿ, ಕ್ರಮ ವಹಿಸಬೇಕು’ ಎಂದರು.</p>.<p>‘ಪಡಿತರ ಸರಿಯಾಗಿ ವಿತರಣೆ ಮಾಡದ, ಅಕ್ರಮ ನಡೆಸುವ ನ್ಯಾಯಬೆಲೆ ಅಂಗಡಿಗಳಿದ್ದರೆ ಪತ್ತೆ ಹಚ್ಚಿ ಪರವಾನಗಿ ರದ್ದುಗೊಳಿಸಬೇಕು’ ಎಂದು ಹೇಳಿದರು.</p>.<p>‘ಗೃಹಲಕ್ಷ್ಮಿ ಯೋಜನೆಯ ಮೇ ತಿಂಗಳ ಹಣ ಎರಡು ದಿನಗಳಲ್ಲಿ ಜಮೆ ಆಗಲಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಉಪಾಧ್ಯಕ್ಷ ಮುರಗಯ್ಯ ವಿರಕ್ತಮಠ, ಶಾಂತಪ್ಪ ಅಕ್ಕಿ, ರೇಹನ್ ರಝಾ ಐನಾಪೂರಿ, ರತ್ನಾ ತೇಗೂರಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>