<p><strong>ಧಾರವಾಡ:</strong> 'ಅವತಾರ ಮೆಹರಬಾಬಾ ಅವರು ಸಮಾಜದಲ್ಲಿ ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದರು. ಜೀವನದುದ್ದಕ್ಕೂ ಅನೇಕ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡು ಸಾರ್ಥಕ ಜೀವನ ಸಾಗಿಸಿದರು’ ಎಂದು ಸಾಹಿತಿ ಲಕ್ಷ್ಮೀಕಾಂತ ಇಟ್ನಾಳ ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘವು ಈಚೆಗೆ ಆಯೋಜಿಸಿದ್ದ ಅವತಾರ ಮೆಹೆರಬಾಬಾ ದತ್ತಿ ಉಪನ್ಯಾಸದಲ್ಲಿ `ಅವತಾರ ಮೆಹೆರಬಾಬಾ ಅವರ ಆಧ್ಯಾತ್ಮಿಕ ಜೀವನ ಹಾಗೂ ಸಾಮಾಜಿಕ ಕೊಡುಗೆ' ಕುರಿತು ಮಾತನಾಡಿ, ಮೆರಬಾಬಾ ಅವರು ಪ್ರಶ್ನಿಸುವ ಗುಣ ಬೆಳೆಸಿಕೊಂಡಿದ್ದರು. ಅವರಿಗೆ ಅಪಾರ ಶಿಷ್ಯರು ಇದ್ದರು’ ಎಂದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ‘ಅಸಮಾನತೆ ತೊಲಗಬೇಕು. ನಾವೆಲ್ಲ ಒಂದು ಎಂಬ ಭಾವನೆ ಮೂಡಬೇಕು‘ ಎಂದರು.</p>.<p>ನಿವೃತ್ತ ಬ್ಯಾಂಕ್ ಅಧಿಕಾರಿ ಯು.ಎಸ್.ಕುನ್ನಿಭಾವಿ, ಲತೀಫ್ ಎಸ್.ಕೆ, ವಿಶ್ವೇಶ್ವರಿ ಹಿರೇಮಠ, ಶಂಕರ ಕುಂಬಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> 'ಅವತಾರ ಮೆಹರಬಾಬಾ ಅವರು ಸಮಾಜದಲ್ಲಿ ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದರು. ಜೀವನದುದ್ದಕ್ಕೂ ಅನೇಕ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡು ಸಾರ್ಥಕ ಜೀವನ ಸಾಗಿಸಿದರು’ ಎಂದು ಸಾಹಿತಿ ಲಕ್ಷ್ಮೀಕಾಂತ ಇಟ್ನಾಳ ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘವು ಈಚೆಗೆ ಆಯೋಜಿಸಿದ್ದ ಅವತಾರ ಮೆಹೆರಬಾಬಾ ದತ್ತಿ ಉಪನ್ಯಾಸದಲ್ಲಿ `ಅವತಾರ ಮೆಹೆರಬಾಬಾ ಅವರ ಆಧ್ಯಾತ್ಮಿಕ ಜೀವನ ಹಾಗೂ ಸಾಮಾಜಿಕ ಕೊಡುಗೆ' ಕುರಿತು ಮಾತನಾಡಿ, ಮೆರಬಾಬಾ ಅವರು ಪ್ರಶ್ನಿಸುವ ಗುಣ ಬೆಳೆಸಿಕೊಂಡಿದ್ದರು. ಅವರಿಗೆ ಅಪಾರ ಶಿಷ್ಯರು ಇದ್ದರು’ ಎಂದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ‘ಅಸಮಾನತೆ ತೊಲಗಬೇಕು. ನಾವೆಲ್ಲ ಒಂದು ಎಂಬ ಭಾವನೆ ಮೂಡಬೇಕು‘ ಎಂದರು.</p>.<p>ನಿವೃತ್ತ ಬ್ಯಾಂಕ್ ಅಧಿಕಾರಿ ಯು.ಎಸ್.ಕುನ್ನಿಭಾವಿ, ಲತೀಫ್ ಎಸ್.ಕೆ, ವಿಶ್ವೇಶ್ವರಿ ಹಿರೇಮಠ, ಶಂಕರ ಕುಂಬಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>