ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಈ ಹಿಂದೆ ಸರ್ಕಾರ ನಡೆಸಿದವರು. ತಮ್ಮ ಸರ್ಕಾರವಿದ್ದಾಗ ಡಿಪಿಆರ್ ಮಾಡಿದ್ದೇವೆ ಎನ್ನುವ ಅವರು, ಆಗಲೇ ಯಾಕೆ ಯೋಜನೆ ಅನುಷ್ಠಾನಗೊಳಿಸಿಲ್ಲ.
ವಿರೋಧ ಪಕ್ಷದಲ್ಲಿದ್ದಾಗ ಒಂದು ನಡವಳಿಕೆ, ಆಡಳಿತ ಪಕ್ಷದಲ್ಲಿದ್ದಾಗ ಮತ್ತೊಂದು ನಡವಳಿಕೆ ಸರಿಯಲ್ಲ. ವಿರೋಧ ಪಕ್ಷದವರು ರಾಜಕಾರಣ ಮಾಡಿದರೆ, ಬೇರೆ ರಾಜ್ಯದವರು ಅದನ್ನು ದುರುಪಯೋಗ ಪಡಿಸಿಕೊಳ್ಳುತ್ತಾರೆ. ಈ ಸೂಕ್ಷ್ಮತೆ ಅರಿತುಕೊಳ್ಳಬೇಕು. ಮೇಕೆದಾಟು ಯೋಜನೆ ಅನುಷ್ಠಾನ ರಾಜ್ಯದ ಹಕ್ಕಾಗಿದೆ ಎಂದರು.