ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜಶೇಖರ ಮೆಣಸಿನಕಾಯಿ ಮಾತನಾಡಿ, ‘ಉತ್ತಮ ಆಡಳಿತಗಾರನಾಗಿದ್ದ ಟಿಪ್ಪು, ಮೈಸೂರು ರಾಜ್ಯವನ್ನು ಪ್ರಗತಿ ಪಥದಲ್ಲಿ ಕೊಂಡೊಯ್ದಿದ್ದ. ಯುದ್ಧದಲ್ಲಿ ರಾಕೆಟ್ ತಂತ್ರಜ್ಞಾನವನ್ನು ಮೊದಲಿಗೆ ಬಳಸಿದ. ಇಂದು ನೂರಾರು ರೈತರ ಬದುಕಿಗೆ ಆಸರೆಯಾಗಿರುವ ರೇಷ್ಮೆಯನ್ನು ಪರಿಚಯಿಸಿದ. ಆ ಮೂಲಕ, ಕೃಷಿ ಕ್ಷೇತ್ರದ ಅಭಿವೃದ್ಧಿಗೂ ಮಹತ್ತರ ಕೊಡುಗೆ ನೀಡಿದ’ ಎಂದು ಸ್ಮರಿಸಿದರು.