<p><strong>ಹುಬ್ಬಳ್ಳಿ:</strong> ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರನ್ನು ಸರ್ಕಾರಿ ನೌಕರರಾಗಿ ವಿಲೀನಗೊಳಿಸುವುದು ಇಂದಿನ ಅಗತ್ಯವಾಗಿದೆ’ ಎಂದು ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಲದ ರಾಜ್ಯ ಘಟಕದ ಅಧ್ಯಕ್ಷ ಡಾ. ಕೆ.ಎಸ್. ಶರ್ಮಾ ಹೇಳಿದರು.</p>.<p>ಹುಬ್ಬಳ್ಳಿಯ ಶರ್ಮಾ ದರ್ಶನ ಭವನದಲ್ಲಿ ಇತ್ತೀಚೆಗೆ ಈಶಾನ್ಯ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಮುಖಂಡರ ಹಾಗೂ ಪ್ರತಿನಿಧಿಗಳ ಜಂಟಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ವಿಲೀನಕ್ಕೂ ಮುಂಚೆ ಸಾರಿಗೆ ನಿಗಮಗಳ ಆಡಳಿತ ವರ್ಗ ನೌಕರರ ಸಂಘಟನೆಗಳ ಜತೆ ಮಾಡಿಕೊಂಡಿರುವ ಕೈಗಾರಿಕಾ ಒಪ್ಪಂದಗಳಲ್ಲಿ, ನೌಕರರಿಗೆ ದೊರೆತಿರುವ ಎಲ್ಲಾ ಸೌಲಭ್ಯಗಳನ್ನು ಮುಂದುವರಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಕೈಗಾರಿಕಾ ಒಪ್ಪಂದಗಳ ಮೂಲಕ ಕಳೆದ ಅರವತ್ತು ವರ್ಷಗಳಲ್ಲಿ ಸಾರಿಗೆ ನೌಕರರಿಗೆ ಮಿತಿ ಇಲ್ಲದ ಉಪಧನದ ಪಾವತಿ, ವಾರ್ಷಿಕ ಬಡ್ತಿಯ ವೇತನ ಶ್ರೇಣಿ, ಚಾಲಕರು ಹಾಗೂ ನಿರ್ವಾಹಕರಿಗೆ ವಿಶೇಷ ಭತ್ಯೆ, ಪ್ರೋತ್ಸಾಹಧನದ ಯೋಜನೆಗಳು, 4 ವರ್ಷಕ್ಕೊಮ್ಮೆ ಕಡ್ಡಾಯವಾಗಿ ವೇತನ ಪರಿಷ್ಕರಣೆ ಸೇರಿದಂತೆ, ಹಲವು ಸೌಲಭ್ಯಗಳನ್ನು ಒಪ್ಪಂದದ ಮೂಲಕ ಪಡೆದುಕೊಳ್ಳಲಾಗಿದೆ. ಈ ಸೌಲಭ್ಯಗಳಲ್ಲಿ ಯಾವುದೇ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕಾದ ಅನಿವಾರ್ಯತೆ ಸಾರಿಗೆ ನೌಕರಿರಿಗಿದೆ’ ಎಂದು ಹೇಳಿದರು.</p>.<p>ಸಭೆಯಲ್ಲಿ ಎರಡೂ ನಿಗಮಗಳ 500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಯನ್ನು ಮಹಾಮಂಡಲವು ಸರ್ಕಾರದ ಮುಂದೆ ಮಂಡಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರ ಸಂಘಟನೆ ಮುಖಂಡರಾದ ಚಂದ್ರಕಾಂತ ಗದಗಿ, ಬಸವರಾಜ ಕಣ್ಣಿ, ವಾಯುವ್ಯ ಕರ್ನಾಟಕದ ಮುಖಂಡರಾದ ಪ್ರಕಾಶ ಮೂರ್ತಿ, ವಿ.ಬಿ. ಕುಲಕರ್ಣಿ, ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ಹಾಗೂ ಖಜಾಂಚಿ ದೇವರಾಜ ಅರಸು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರನ್ನು ಸರ್ಕಾರಿ ನೌಕರರಾಗಿ ವಿಲೀನಗೊಳಿಸುವುದು ಇಂದಿನ ಅಗತ್ಯವಾಗಿದೆ’ ಎಂದು ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಲದ ರಾಜ್ಯ ಘಟಕದ ಅಧ್ಯಕ್ಷ ಡಾ. ಕೆ.ಎಸ್. ಶರ್ಮಾ ಹೇಳಿದರು.</p>.<p>ಹುಬ್ಬಳ್ಳಿಯ ಶರ್ಮಾ ದರ್ಶನ ಭವನದಲ್ಲಿ ಇತ್ತೀಚೆಗೆ ಈಶಾನ್ಯ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಮುಖಂಡರ ಹಾಗೂ ಪ್ರತಿನಿಧಿಗಳ ಜಂಟಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ವಿಲೀನಕ್ಕೂ ಮುಂಚೆ ಸಾರಿಗೆ ನಿಗಮಗಳ ಆಡಳಿತ ವರ್ಗ ನೌಕರರ ಸಂಘಟನೆಗಳ ಜತೆ ಮಾಡಿಕೊಂಡಿರುವ ಕೈಗಾರಿಕಾ ಒಪ್ಪಂದಗಳಲ್ಲಿ, ನೌಕರರಿಗೆ ದೊರೆತಿರುವ ಎಲ್ಲಾ ಸೌಲಭ್ಯಗಳನ್ನು ಮುಂದುವರಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಕೈಗಾರಿಕಾ ಒಪ್ಪಂದಗಳ ಮೂಲಕ ಕಳೆದ ಅರವತ್ತು ವರ್ಷಗಳಲ್ಲಿ ಸಾರಿಗೆ ನೌಕರರಿಗೆ ಮಿತಿ ಇಲ್ಲದ ಉಪಧನದ ಪಾವತಿ, ವಾರ್ಷಿಕ ಬಡ್ತಿಯ ವೇತನ ಶ್ರೇಣಿ, ಚಾಲಕರು ಹಾಗೂ ನಿರ್ವಾಹಕರಿಗೆ ವಿಶೇಷ ಭತ್ಯೆ, ಪ್ರೋತ್ಸಾಹಧನದ ಯೋಜನೆಗಳು, 4 ವರ್ಷಕ್ಕೊಮ್ಮೆ ಕಡ್ಡಾಯವಾಗಿ ವೇತನ ಪರಿಷ್ಕರಣೆ ಸೇರಿದಂತೆ, ಹಲವು ಸೌಲಭ್ಯಗಳನ್ನು ಒಪ್ಪಂದದ ಮೂಲಕ ಪಡೆದುಕೊಳ್ಳಲಾಗಿದೆ. ಈ ಸೌಲಭ್ಯಗಳಲ್ಲಿ ಯಾವುದೇ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕಾದ ಅನಿವಾರ್ಯತೆ ಸಾರಿಗೆ ನೌಕರಿರಿಗಿದೆ’ ಎಂದು ಹೇಳಿದರು.</p>.<p>ಸಭೆಯಲ್ಲಿ ಎರಡೂ ನಿಗಮಗಳ 500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಯನ್ನು ಮಹಾಮಂಡಲವು ಸರ್ಕಾರದ ಮುಂದೆ ಮಂಡಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರ ಸಂಘಟನೆ ಮುಖಂಡರಾದ ಚಂದ್ರಕಾಂತ ಗದಗಿ, ಬಸವರಾಜ ಕಣ್ಣಿ, ವಾಯುವ್ಯ ಕರ್ನಾಟಕದ ಮುಖಂಡರಾದ ಪ್ರಕಾಶ ಮೂರ್ತಿ, ವಿ.ಬಿ. ಕುಲಕರ್ಣಿ, ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ಹಾಗೂ ಖಜಾಂಚಿ ದೇವರಾಜ ಅರಸು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>