<p><strong>ಧಾರವಾಡ</strong>: ಸಾಧನಕೇರಿಯ ಪ್ರೌಢಶಾಲೆಯ ವಿಜ್ಞಾನ ಮತ್ತು ಗಣಿತ ಶಿಕ್ಷಕರಿಗೆ ತರಬೇತಿ ನೀಡಲು ‘ಮೈಂಡ್ ವೇವ್ ಎಜು ಹಬ್’ ಕ್ಯಾಂಪಸ್ ನಿರ್ಮಿಸಲಾಗಿದ್ದು, ಮಾರ್ಚ್ 1 ರಂದು ಉದ್ಘಾಟನೆ ನಡೆಯಲಿದೆ ಎಂದು ತರಬೇತಿ ಕೇಂದ್ರದ ಸಂಚಾಲಕ ಎಸ್.ಎಂ.ಶಿವಪ್ರಸಾದ ತಿಳಿಸಿದರು. </p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಇಸ್ರೊ ಮಾಜಿ ಅಧ್ಯಕ್ಷ ಕಿರಣಕುಮಾರ್ ಉದ್ಘಾಟನೆ ನೇರವೇರಿಸುವರು. ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ, ಶೈಕ್ಷಣಿಕ ಚಿಂತಕ ಗುರುರಾಜ ಕರ್ಜಗಿ ಪಾಲ್ಗೊಳ್ಳುವರು’ ಎಂದರು. </p>.<p>‘ಶಿಕ್ಷಕರಿಗೆ ಪರಿಣಿತ ಬೋಧನಾ ಕೌಶಲಗಳ ತರಬೇತಿ ನೀಡಿ ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ ನೀಡುವುದು ಸಂಸ್ಥೆಯ ಉದ್ದೇಶವಾಗಿದೆ. ಸಂಸ್ಥೆಯು ಸುಸಜ್ಜಿತ ಪ್ರಯೋಗಾಲಯ, ಗ್ರಂಥಾಲಯ ಮತ್ತು ವಿಜ್ಞಾನಿ ಪ್ರೊ.ಸಿ.ಎನ್.ರಾವ್ ಅವರಿಗೆ ಸಮರ್ಪಿತವಾದ ಹಾಲ್ ಆಫ್ ಸೈನ್ಸ ಸೇರಿದಂತೆ ಅನೇಕ ಸೌಲಭ್ಯಗಳನ್ನು ಹೊಂದಿದೆ’ ಎಂದರು.</p>.<p>‘ಉದ್ಯೋಗಾಕಾಂಕ್ಷಿ ಶಿಕ್ಷಕರು ಹಾಗೂ ಶಿಕ್ಷಕರಿಗೆ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಮೂರು ತಿಂಗಳು ತರಬೇತಿ ನೀಡಲಾಗುವುದು. ಮಾರ್ಚ್ 7 ರಿಂದ ತರಬೇತಿ ಆರಂಭವಾಗಲಿದೆ’ ಎಂದರು. <br /> ಮಹೇಶ ಮಾಸಾಳ, ಸುಭಾಸ ಪಾಟೀಲ, ಉದಯಶಂಕರ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಸಾಧನಕೇರಿಯ ಪ್ರೌಢಶಾಲೆಯ ವಿಜ್ಞಾನ ಮತ್ತು ಗಣಿತ ಶಿಕ್ಷಕರಿಗೆ ತರಬೇತಿ ನೀಡಲು ‘ಮೈಂಡ್ ವೇವ್ ಎಜು ಹಬ್’ ಕ್ಯಾಂಪಸ್ ನಿರ್ಮಿಸಲಾಗಿದ್ದು, ಮಾರ್ಚ್ 1 ರಂದು ಉದ್ಘಾಟನೆ ನಡೆಯಲಿದೆ ಎಂದು ತರಬೇತಿ ಕೇಂದ್ರದ ಸಂಚಾಲಕ ಎಸ್.ಎಂ.ಶಿವಪ್ರಸಾದ ತಿಳಿಸಿದರು. </p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಇಸ್ರೊ ಮಾಜಿ ಅಧ್ಯಕ್ಷ ಕಿರಣಕುಮಾರ್ ಉದ್ಘಾಟನೆ ನೇರವೇರಿಸುವರು. ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ, ಶೈಕ್ಷಣಿಕ ಚಿಂತಕ ಗುರುರಾಜ ಕರ್ಜಗಿ ಪಾಲ್ಗೊಳ್ಳುವರು’ ಎಂದರು. </p>.<p>‘ಶಿಕ್ಷಕರಿಗೆ ಪರಿಣಿತ ಬೋಧನಾ ಕೌಶಲಗಳ ತರಬೇತಿ ನೀಡಿ ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ ನೀಡುವುದು ಸಂಸ್ಥೆಯ ಉದ್ದೇಶವಾಗಿದೆ. ಸಂಸ್ಥೆಯು ಸುಸಜ್ಜಿತ ಪ್ರಯೋಗಾಲಯ, ಗ್ರಂಥಾಲಯ ಮತ್ತು ವಿಜ್ಞಾನಿ ಪ್ರೊ.ಸಿ.ಎನ್.ರಾವ್ ಅವರಿಗೆ ಸಮರ್ಪಿತವಾದ ಹಾಲ್ ಆಫ್ ಸೈನ್ಸ ಸೇರಿದಂತೆ ಅನೇಕ ಸೌಲಭ್ಯಗಳನ್ನು ಹೊಂದಿದೆ’ ಎಂದರು.</p>.<p>‘ಉದ್ಯೋಗಾಕಾಂಕ್ಷಿ ಶಿಕ್ಷಕರು ಹಾಗೂ ಶಿಕ್ಷಕರಿಗೆ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಮೂರು ತಿಂಗಳು ತರಬೇತಿ ನೀಡಲಾಗುವುದು. ಮಾರ್ಚ್ 7 ರಿಂದ ತರಬೇತಿ ಆರಂಭವಾಗಲಿದೆ’ ಎಂದರು. <br /> ಮಹೇಶ ಮಾಸಾಳ, ಸುಭಾಸ ಪಾಟೀಲ, ಉದಯಶಂಕರ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>