ಇಲ್ಲಿನ ಆರ್ಎಸ್ಎಸ್ ಕಚೇರಿ ಕೇಶವಕುಂಜದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ’ಕಾಂಗ್ರೆಸ್ ನಾಯಕರು ಯಾವಾಗಲೂ ಕಿರಿಕ್ ಮಾಡುತ್ತಲೇ ಇರುತ್ತಾರೆ. ಇತ್ತೀಚಿಗೆ ಅವರು ಸುಳ್ಳು ಹೇಳುವುದನ್ನೂ ಚೆನ್ನಾಗಿ ಕಲಿತಿದ್ದಾರೆ. ಬಿಜೆಪಿಯ ಹಲವು ನಾಯಕರು ತಮ್ಮ ಪಕ್ಷ ಸೇರುತ್ತಾರೆ ಎಂದು ಕಾಂಗ್ರೆಸ್ನವರು ಹೇಳುತ್ತಿದ್ದಾರೆ. ಅವರು ಎಷ್ಟೊಂದು ಚೆನ್ನಾಗಿ ಸುಳ್ಳು ಹೇಳುತ್ತಾರೆ ಎನ್ನುವುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು’ ಎಂದು ಪ್ರಶ್ನಿಸಿದರು.