ಹುಬ್ಬಳ್ಳಿ: ಬೈಕ್ ಅಪಘಾತದಲ್ಲಿ ಮೃತಪಟ್ಟ ಹುಬ್ಬಳ್ಳಿಯ ಪವರ್ ಟಿ.ವಿ ಸುದ್ದಿವಾಹಿನಿಯ ಕ್ಯಾಮೆರಾಮ್ಯಾನ್ ಸುನೀಲ ಪಾಚಂ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮಂಗಳವಾರ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಬಳಿಕ ವೈಯಕ್ತಿಕವಾಗಿ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶೆಟ್ಟರ್, ‘ಸುನೀಲ ಲವಲವಿಕೆಯ ಹುಡುಗನಾಗಿದ್ದ. ಅನೇಕ ಸಲ ಅವರನ್ನು ನೋಡಿದ್ದೇನೆ. ಆತನ ಆಕಾಲಿಕ ಸಾವು ನೋವುಂಟು ಮಾಡಿದೆ’ ಎಂದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಘಟಕದ ಅಧ್ಯಕ್ಷ ಈಶ್ವರಗೌಡ ಪಾಟೀಲ, ರವಿ ಕಲಾಲ, ಸಂಗೀತಾ ಬದ್ದಿ ಇದ್ದರು.